Webdunia - Bharat's app for daily news and videos

Install App

ಹೆಲ್ಮೆಟ್ ಧರಿಸಿ ಮದುವೆಮನೆಗೆ ಹೊರಟ ದಲಿತ ಮದುಮಗ

Webdunia
ಬುಧವಾರ, 13 ಮೇ 2015 (17:45 IST)
ಮದುವೆಯ ದಿನ ತಮ್ಮ ಕಡೆಯ ದಿಬ್ಬಣದೊಂದಿಗೆ ಮದುಮಗ ಕುದುರೆ ಏರಿ ಬರುವುದು ಉತ್ತರ ಭಾರತದಲ್ಲಿ ಸಾಮಾನ್ಯ. ಅದರಂತೆ ಮಧ್ಯಪ್ರದೇಶದ ನೆಗ್ರೂನ್‌ ಗ್ರಾಮದ ಆ ಯುವಕ ಕುದುರೆಯನ್ನೇರಿ ಕಲ್ಯಾಣ ಮಂಟಪದತ್ತ ಸಾಗಿದ್ದ. ಆದರೆ ವಿಚಿತ್ರವಾದ ಸಂಗತಿ ಎಂದರೆ ಆತ ಹೆಲ್ಮೆಟ್ ಕೂಡ ಧರಿಸಿದ್ದ. ಈತ ಹೀಗೆ ಮಾಡಲು ಕಾರಣ  ಮೇಲ್ವರ್ಗದ ಜನರ ಹಲ್ಲೆಯ ಭೀತಿ. 

ಇದು  ನಡೆದಿದ್ದು ಮಧ್ಯಪ್ರದೇಶದಲ್ಲಿ. ದಲಿತ ಸಮುದಾಯದ ಮದುಮಗನೊಬ್ಬ ಕುದುರೆ ಏರಿ ಮದುವೆಯಾಗಲು ಹೊರಟುದುದನ್ನು ಕಂಡು ಸಹಿಸದಾದ ಮೇಲ್ಜಾತಿಯ ಜನರು, ಆತನ ಮತ್ತು ದಿಬ್ಬಣದ ಮೇಲೆ ಸಹ ಕಲ್ಲೆಸೆದು ಅಮಾನುಷ, ನಿರ್ಲಜ್ಜ ವರ್ತನೆಯನ್ನು ತೋರಿದ್ದಾರೆ. ಅಲ್ಲದೇ ಆತ ಸವಾರಿ ಹೊರಟಿದ್ದ ಕುದುರೆಯನ್ನು ಸಹ ಎಳೆದೊಯ್ದಿದ್ದಾರೆ.
 
ಮೇ 10 ರ ರಾತ್ರಿ ನಡೆದ ಈ ಘಟನೆಯಲ್ಲಿ ಹೆಚ್ಚುವರಿ ತಹಶೀಲ್ದಾರ್‌ ಕೆ ಎಲ್‌ ಜೈನ್‌ ಸೇರಿದಂತೆ ಕನಿಷ್ಠ ಐವರು ಗಾಯಗೊಂಡಿದ್ದಾರೆ ಎಂದು ತಾಲ್ ಪೊಲೀಸ್ ಠಾಣಾಧಿಕಾರಿ ಸುರೇಶ್ ಬಾಲರಾಜ್ ತಿಳಿಸಿದ್ದಾರೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ 72 ಜನರ ಮೇಲೆ ದೂರು ದಾಖಲಾಗಿದೆ. 
 
ಮೇಲ್ವರ್ಗದ ಜನರ ಹಲ್ಲೆಯ ಅನುಮಾನ ಮೊದಲೇ ಇದ್ದುದರಿಂದ ವಧುವಿನ ತಂದೆ  ಮೊದಲೇ ಪೊಲೀಸರು ಸಹಾಯವನ್ನು ಕೋರಿದ್ದ . ಆದರು ಕೂಡ ದಿಬ್ಬಣದ ಮೇಲೆ ಹಲ್ಲೆ ನಡೆದಿದೆ. 
 
ಕುದುರೆಯನ್ನು ಸಹ ಎಳೆದೊಯ್ದಿದ್ದರಿಂದ ಮತ್ತೊಂದು ಕುದುರೆಯನ್ನು ತರಸಲಾಯಿತು. ದುರುಳ ಜನರು ಮತ್ತೆ ದಾಳಿಯನ್ನು  ಮುಂದುವರೆಸಿದರು. ಹೀಗಾಗಿ ಪೊಲೀಸರು ಮದುಮಗನಿಗೆ ಹೆಲ್ಮೆಟ್‌ನ್ನು ತಂದುಕೊಟ್ಟು ಸವಾರಿಯನ್ನು ಮುಂದುವರೆಸಲು ಅವಕಾಶ ಮಾಡಿಕೊಟ್ಟರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments