Webdunia - Bharat's app for daily news and videos

Install App

ಗುಜರಾತ್‌ ರಾಜ್ಯಾದ್ಯಂತ ದಲಿತರ ಭಾರಿ ಪ್ರತಿಭಟನೆ: ಪೊಲೀಸ್ ಪೇದೆಯ ಹತ್ಯೆ

Webdunia
ಬುಧವಾರ, 20 ಜುಲೈ 2016 (14:48 IST)
ದಲಿತ ಯುವಕರ ಮೇಲೆ ನಡೆದ ದೌರ್ಜನ್ಯ ಘಟನೆ ವಿರೋಧಿಸಿ ದಲಿತ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆಯ ಕಾವು ರಾಜ್ಯಾದ್ಯಂತ ವಿಸ್ತರಿಸುತ್ತಿದೆ. ಅಹ್ಮದಾಬಾದ್‌ನಲ್ಲಿ ದಲಿತರ ಪ್ರತಿಭಟನೆ ಸಂದರ್ಭದಲ್ಲಿ ಕಲ್ಲು ತೂರಾಟದಲ್ಲಿ ಪೊಲೀಸ್ ಪೇದೆ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. 
 
ಕಳೆದ ಜುಲೈ 11 ರಂದು ಗಿರ್-ಸೋಮನಾಥ್ ಜಿಲ್ಲೆಯಲ್ಲಿ ಗೋವುಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಕೆಲ ಯುವಕರು ದಲಿತ ಸಮುದಾಯದ ಕೆಲ ಯುವಕರ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ದಲಿತ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. 
 
ಅಮ್ರೇಲಿ ಪಟ್ಟಣದಲ್ಲಿ ದಲಿತ ಸಮುದಾಯದವರು ಕಲ್ಲು ತೂರಾಟ ನಡೆಸಿದಾಗ ಸ್ಥಳೀಯ ಪೊಲೀಸ್ ಅಪರಾಧ ದಳ ವಿಭಾಗದ ಪೊಲೀಸ್ ಪೇದೆ ಪಂಕಜ್ ಅಮ್ರೇಲಿ ಸಾವನ್ನಪ್ಪಿದ್ದಾರೆ. ಇತರ 10 ಜನರು ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  
 
ಕಳೆದ ಮಂಗಳವಾರದಂದು ಜುನಾಗಢ್ ಜಿಲ್ಲೆಯ ಬಾಟ್ವಾ ಪಟ್ಟಣದಲ್ಲಿ ಮೂವರು ದಲಿತ ಯುವಕರು ವಿಷ ಸೇವಿಸಿ ಆತ್ಮಹತ್ಯೆ ಪ್ರಯತ್ನ ನಡೆಸಿದ ಘಟನೆ ವರದಿಯಾಗಿದೆ.
 
ರಾಜಕೋಟ್ ಜಿಲ್ಲೆಯ ಗೊಂಡಾಲ್ ಮತ್ತು ಜಮಕನಡೊರ್ನಾ ನಗರಗಳಲ್ಲಿ ಏಳು ಮಂದಿ ದಲಿತ ಯುವಕರು ಆತ್ಮಹತ್ಯೆಗೆ ಪ್ರಯತ್ನಿಸುತ್ತಿರುವ ಸುದ್ದಿ ಬಹಿರಂಗವಾಗುತ್ತಿದ್ದಂತೆ ದಲಿತ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದ್ದಲ್ಲದೇ ಹಲವಾರು ಸರಕಾರಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ತೊಡಗಿರುವ ನೂರಾರು ದಲಿತ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments