ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

Krishnaveni K
ಮಂಗಳವಾರ, 22 ಜುಲೈ 2025 (15:25 IST)
ನವದೆಹಲಿ: ಎಲ್ಲಾ ಸರಿ ಹೋಗಿದ್ದರೆ ಇಂದು ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಆಂಡ್ ಗ್ಯಾಂಗ್ ಗೆ ನೀಡಲಾಗಿದ್ದ ಜಾಮೀನು ಪ್ರಶ್ನಿಸಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ತೀರ್ಪು ಬರಬೇಕಿತ್ತು. ಆದರೆ ದರ್ಶನ್ ಪರ ವಕೀಲ ಕಪಿಲ್ ಸಿಬಲ್ ಬೇಕೆಂದೇ ಗೈರಾದರಾ ಎಂಬ ಅನುಮಾನ ಶುರುವಾಗಿದೆ.

ನಟ ದರ್ಶನ್ ಡೆವಿಲ್ ಸಿನಿಮಾ ಕೆಲಸದಲ್ಲಿ ಥೈಲ್ಯಾಂಡ್ ನಲ್ಲಿದ್ದಾರೆ. ಇತ್ತ ಸುಪ್ರೀಂಕೋರ್ಟ್ ನಲ್ಲಿ ಅವರ ವಿರುದ್ಧವಾಗಿ ತೀರ್ಪು ಬರುವ ಸಾಧ್ಯತೆಯಿತ್ತು. ಒಂದು ವೇಳೆ ಸುಪ್ರೀಂಕೋರ್ಟ್ ಬೇಲ್ ರದ್ದುಪಡಿಸಿದರೆ ದರ್ಶನ್ ಆಂಡ್ ಗ್ಯಾಂಗ್ ಮತ್ತೆ ಜೈಲು ಸೇರಬೇಕಾಗುತ್ತದೆ.

ಇಂದು ಸುಪ್ರೀಂಕೋರ್ಟ್ ನಲ್ಲಿ ದರ್ಶನ್ ಮತ್ತು ಇತರೆ ಆರೋಪಿಗಳ ಪರ ವಕೀಲರು ವಾದ ಮಂಡಿಸಬೇಕಿತ್ತು. ಆದರೆ ಇತರೆ ಆರೋಪಿಗಳ ವಕೀಲರು ಮಾತ್ರ ಹಾಜರಿದ್ದರು. ದರ್ಶನ್ ಪರ ವಕೀಲರಾಗಿದ್ದ ಖ್ಯಾತ ಅಡ್ವೋಕೇಟ್ ಕಪಿಲ್ ಸಿಬಲ್ ಗೈರಾಗಿದ್ದರು. ಬೇರೆ ಪ್ರಕರಣದ ವಿಚಾರಣೆ ನೆಪವೊಡ್ಡಿ ಅವರು ಇಂದು ಗೈರಾಗಿದ್ದಾರೆ.

ಆದರೆ ಇದರ ಹಿಂದೆ ಬೇರೆಯೇ ಲೆಕ್ಕಾಚಾರವಿದೆ ಎನ್ನಲಾಗುತ್ತಿದೆ. ತೀರ್ಪು ಮುಂದೂಡುವ ಉದ್ದೇಶದಿಂದಲೇ ಕಪಿಲ್ ಸಿಬಲ್ ಕಾಲಾವಕಾಶ ಕೇಳಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ದರ್ಶನ್ ಗೂ ಕಾಲಾವಕಾಶ ಸಿಕ್ಕಂತಾಗುತ್ತದೆ. ಇದೇ ಕಾರಣಕ್ಕೆ ಕಪಿಲ್ ಗೈರಾಗಿದ್ದರಾ ಎಂಬ ಅನುಮಾನ ಈಗ ಎಲ್ಲರಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments