Webdunia - Bharat's app for daily news and videos

Install App

ಅಳುತ್ತ ಪರೀಕ್ಷೆ ಬರೆದ ಹುತಾತ್ಮ ಯೋಧನ ಮಕ್ಕಳು

Webdunia
ಬುಧವಾರ, 21 ಸೆಪ್ಟಂಬರ್ 2016 (12:23 IST)
ಕಾಶ್ಮೀರದ ಉರಿಯಲ್ಲಿ ನಡೆದ ಉಗ್ರ ದಾಳಿಯಲ್ಲಿ ಹುತಾತ್ಮರಾದ ಸೈನಿಕ ಎಸ್.ಕೆ. ವಿದ್ಯಾರ್ಥಿ ಅವರ ಮೂವರು ಮಕ್ಕಳು ತಂದೆಯನ್ನು  ಕಳೆದುಕೊಂಡ ನೋವಿನಲ್ಲೂ ಪರೀಕ್ಷೆ ಬರೆದು ಅಗಲಿದ ತಂದೆಗೆ ನೀಡಿದ್ದ ಮಾತನ್ನು ಪಾಲಿಸಿದ್ದಾರೆ.
 
ತಾವು ಓದಿನ ಕಡೆ ಸದಾ ಗಮನ ನೀಡುತ್ತೇವೆ ಎಂದು ಅವರು ತಂದೆಗೆ ವಾಗ್ದಾನ ಮಾಡಿದ್ದು, ಅದರಂತೆಯೇ ನಡೆದುಕೊಂಡಿದ್ದಾರೆ. 
 
ಭಾನುವಾರ ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ನಡೆದ ಫಗ್ರರ ದಾಳಿಯಲ್ಲಿ ಹುತಾತ್ಮರಾದ 18 ಸೈನಿಕರಲ್ಲಿ ಬಿಹಾರದ ಗಯಾ ಜಿಲ್ಲೆಯ ಕುಂಕನಾರಿ ಗ್ರಾಮದ ಯೋಧ ಎಸ್.ಕೆ ವಿದ್ಯಾರ್ಥಿ ಕೂಡ ಸೇರಿದ್ದಾರೆ. 1999ರಲ್ಲಿ ಸೈನ್ಯ ಸೇರಿದ್ದ ವಿದ್ಯಾರ್ಥಿಗೆ ಆರ್ತಿ, ಅಂಶು, ಅನ್ಶಿಕಾ ಮತ್ತು ಆರ್ಯನ್ ಎಂಬ ನಾಲ್ಕು ಮಕ್ಕಳಿದ್ದಾರೆ. ಆರ್ತಿ 8ನೇ ತರಗತಿಯಲ್ಲಿ ಓದುತ್ತಿದ್ದರೆ, ಅಂಶು ಹಾಗೂ ಅಂಶಿಕಾ 2ನೇ ತರಗತಿಯಲ್ಲಿ ಓದುತ್ತಿದ್ದಾಳೆ.  ಆರ್ಯನ್‌ಗಿನ್ನು 2 ವರ್ಷ.
 
ತಮ್ಮ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆಯಬೇಕೆಂಬುದು ವಿದ್ಯಾರ್ಥಿ ಕನಸಾಗಿತ್ತು. ಹೀಗಾಗಿ ತಂದೆ ಗತಿಸಿದ್ದರೂ ಮಕ್ಕಳು ಅವರ ಕನಸಿಗೆ ತೊಡಕಾಗಬಾರದೆಂದು ಪರೀಕ್ಷೆಯನ್ನು ಬರೆದಿದ್ದಾರೆ. ಈ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಪರೀಕ್ಷೆ ಬರೆಯುವಾಗ ಸಹ ಮಕ್ಕಳು ಅಳುತ್ತಲೇ ಇದ್ದರು ಎಂದು ಶಾಲೆಯ ಪ್ರಾಚಾರ್ಯ ಎ.ಕೆ.ಜನಾ ಹೇಳಿದ್ದಾರೆ .
 
ಕಳೆದ ಆಗಸ್ಟ್ ತಿಂಗಳಲ್ಲಿ ಅಪ್ಪ ಮನೆಗೆ ಬಂದಾಗ ಚೆನ್ನಾಗಿ ಓದ ನನ್ನ ಕನಸನ್ನು ನನಸು ಮಾಡಿ ಎಂದು ಹೇಳಿದ್ದರು ಎಂದು ಕಣ್ಣೀರಾಗುತ್ತಾಳೆ ಯೋಧನ ಹಿರಿಯ ಮಗಳು ಆರ್ತಿ. 
 
ಅವಕಾಶ ಸಿಕ್ಕಿದರೆ ತಾನು ಅಪ್ಪನಂತೆ ಸೈನ್ಯ ಸೇರುತ್ತೇನೆ. ನಾವು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲೇಬೇಕು. ನನ್ನ ತಂದೆಯ ಬಗ್ಗೆ ಹೆಮ್ಮೆ ಪಡುತ್ತೇನೆ. ಅವರು ಸಾಯಲಿಲ್ಲ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ನಾನು ದೆಹಲಿಯ ಐಐಟಿಗೆ ಸೇರಬೇಕೆಂದು ಬಯಸಿದ್ದೆ. ಈಗ ಅದು ಸಾಧ್ಯವಾಗುತ್ತದೆಯೋ ಇಲ್ಲ ಎಂಬುದು ಭವಿಷ್ಯಕ್ಕೆ ಬಿಟ್ಟಿದ್ದು. ಅವಕಾಶ ಸಿಕ್ಕಿದರೆ ನಾನು ಸೈನ್ಯ ಸೇರುತ್ತೇನೆ ಎನ್ನುತ್ತಾಳೆ ಅವಳು.

ಮಗನ ಸಾವಿನಿಂದ ಆಘಾತಗೊಂಡಿರುವ ವಿದ್ಯಾರ್ಥಿ ತಂದೆ ಮಥುರಾ ಯಾದವ್ , ನನಗೆ ವಯಸ್ಸಾಗಿದೆ. ಆದರೂ ಗಡಿಯಲ್ಲಿ ಹೋರಾಡಲು ನಾನು ಸಿದ್ಧ. ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲೇ ಬೇಕು. ಪ್ರತೀಕಾರ ತೀರಿಸಿಕೊಳ್ಳದಿದ್ದರೆ ನಾನು ನನ್ನ ಉಳಿದ ಮಕ್ಕಳನ್ನು ಸೈನ್ಯಕ್ಕೆ ಸೇರಿಸಲಾರೆ ಎಂದು  ಸೋಮವಾರ ಸರ್ಕಾರಕ್ಕೆ ಸೇಡು ತೀರಿಸಿಕೊಳ್ಳಿ ಎಂದು ಆಗ್ರಹಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments