Webdunia - Bharat's app for daily news and videos

Install App

ದೆಹಲಿ ನಗರವನ್ನೇ ಸ್ಫೋಟಿಸಲು ದಾವುದ್ ಇಬ್ರಾಹಿ ಸಂಚು: ಗುಪ್ತಚರ ಇಲಾಖೆ

Webdunia
ಮಂಗಳವಾರ, 7 ಜೂನ್ 2016 (12:18 IST)
ಭೂಗತ ದೊರೆ ದಾವೂದ್ ಇಬ್ರಾಹಿಂ ದೆಹಲಿ ನಗರವನ್ನು ಗುರಿಯಾಗಿಸಿ ಉಗ್ರರ ದಾಳಿಗಳನ್ನು ನಡೆಸಲು ಸಂಚು ರೂಪಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಪಾಕಿಸ್ತಾನದಲ್ಲಿ ಅಡಗಿದ್ದಾನೆ ಎನ್ನಲಾದ ದಾವೂದ್, 1993 ರಲ್ಲಿ ಮುಂಬೈನಲ್ಲಿ ನಡೆಸಿದ ಸರಣಿ ಬಾಂಬ್‌ಸ್ಫೋಟದಲ್ಲಿ 257 ಜನ ಸಾವನ್ನಪ್ಪಿದ ಘಟನೆಯಂತೆ ದೆಹಲಿಯಲ್ಲಿ ಅಂತಹದೆ ದಾಳಿ ನಡೆಸುವಂತೆ ತನ್ನ ಬೆಂಬಲಿಗರಿಗೆ ಆದೇಶ ನೀಡಿದ್ದಾನೆ ಎನ್ನಲಾಗಿದೆ. 
 
ನಕಲಿ ನೋಟಿನ ಜಾಲ , ಮಾದಕ ವಸ್ತು ಕಳ್ಳಸಾಗಾಣೆಯಲ್ಲಿ ತೊಡಗಿದ್ದ ದಾವೂದ್, ಇದೀಗ ದೇಶಾದ್ಯಂತ ಉಗ್ರರ ದಾಳಿಗಳನ್ನು ನಡೆಸುವತ್ತ ಗಮನಹರಿಸಿರುವುದು ಆತಂಕವನ್ನು ಸೃಷ್ಟಿಸಿದೆ. 
 
ಗುಪ್ತಚರ ಅಧಿಕಾರಿಗಳ ಪ್ರಕಾರ, ದಾವುದ್ ಇಬ್ರಾಹಿಂ ಮಧ್ಯಪ್ರದೇಶ ಮೂಲದ ಬಾಡಿಗೆ ಹಂತಕರಿಗೆ ನಿರ್ದೇಶನ ನೀಡಿದ್ದು ದೆಹಲಿ ಮೇಲೆ ಉಗ್ರ ದಾಳಿಯನ್ನು ನಡೆಸುವಂತೆ ಆದೇಶಿಸಿದ್ದಾನೆ ಎಂದು ತಿಳಿಸಿದ್ದಾರೆ.
 
ಮಧ್ಯಪ್ರದೇಶದ ಬಾಡಿಗೆ ಹಂತಕರು ಈಗಾಗಲೇ ದೆಹಲಿ ನಗರವನ್ನು ಪ್ರವೇಶಿಸಿದ್ದು, ಉಗ್ರ ದಾಳಿಗಾಗಿ ಸಂಚು ರೂಪಿಸಿದ್ದಾರೆ ಎನ್ನಲಾಗಿದೆ. 
 
ದೆಹಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ದಾವುದ್ ಬಾಡಿಗೆ ಹಂತಕರನ್ನು ವಶಕ್ಕೆ ತೆಗೆದುಕೊಳ್ಳಲು ಭಾರಿ ಕಾರ್ಯಾಚರಣೆ ಕೈ ಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಇಂದಿರಾ ಗಾಂಧಿ ಇಂಟರ್‌ನ್ಯಾಷನಲ್ ಏರ್‌ಪೋರ್ಟ್, ದೆಹಲಿ ಮೆಟ್ರೋ, ವಿಧಾನಸಭಾ, ನವದೆಹಲಿ ರೈಲ್ವೆ ನಿಲ್ದಾಣ ಉಗ್ರರ ಪ್ರಮುಖ ಗುರಿಗಳಾಗಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ