Webdunia - Bharat's app for daily news and videos

Install App

ವರದಕ್ಷಿಣೆಗಾಗಿ ಊಟ ನೀಡದೆ 21ಕೆಜಿ ಕುಸಿದು ಮಹಿಳೆ ಸಾವು ಪ್ರಕರಣ: ಪತಿ, ಅತ್ತೆಗೆ ಜೀವಾವಧಿ ಶಿಕ್ಷೆ

Sampriya
ಸೋಮವಾರ, 28 ಏಪ್ರಿಲ್ 2025 (19:20 IST)
Photo Credit X
ಕೊಲ್ಲಂ: ಪೂಯಪಲ್ಲಿಯಲ್ಲಿ 28 ವರ್ಷದ ಮಹಿಳೆ ಮೇಲೆ ನಡೆದ ವರದಕ್ಷಿಣೆ ಪ್ರಕರಣ ಸಂಬಂಧ ಆಕೆಯ ಪತಿ ಹಾಗೂ ತಾಯಿಗೆ ಕೋರ್ಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಹಸಿವಿನಿಂದ ಕೊಂದ ಪ್ರಕರಣದಲ್ಲಿ ಚಂದುಲಾಲ್ (36) ಮತ್ತು ಅವರ ತಾಯಿ ಗೀತಾ ಲಾಲಿ (62) ತಪ್ಪಿತಸ್ಥರೆಂದು ಕೊಲ್ಲಂ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ತೀರ್ಪು ನೀಡಿದೆ. ಅಲ್ಲದೆ ತಲಾ 1 ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ಮೂರನೇ ಆರೋಪಿ ಹಾಗೂ ಚಂದುಲಾಲ್‌ನ ತಂದೆ ಲಾಲಿ (66) ಒಂದು ವರ್ಷದ ಹಿಂದೆ ಇತ್ತಿಕ್ಕಾರ ನದಿಯ ಬಳಿ ಶವವಾಗಿ ಪತ್ತೆಯಾಗಿದ್ದರು.

ತುಷಾರಾ(26) ಅವರಿಗೆ ಊಟ ನೀಡದ ಕಾರಣ ಅವರು ಮೃತಪಟ್ಟಿದ್ದರು. ಇದು ಕೇರಳದಲ್ಲಿ ಭಾರೀ ಆಕ್ರೋಶ ಹೊರಹಾಕಿತ್ತು.

ಹಲವು ದಿನಗಳ ಕಾಲ ಊಟ ಕೊಡದೆ ತುಷಾರಾ ಅವರ ತೂಕ 21ಕೆಜಿಗೆ ಕುಸಿದಿತ್ತು.  ತೀವ್ರವಾಗಿ ನಿತ್ರಾಣರಾಗಿದ್ದ ಅವರು 2019ರಲ್ಲಿ ಕೊನೆಯುಸಿರೆಳೆದರು.

ಈ ಸಾವಿನ ಸಂಬಂಧ ಪತಿ ಮತ್ತು ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಚಂದೂಲಾಲ್ ಮತ್ತು ಗೀತಾ ಅವರನ್ನು ಅರೆಸ್ಟ್ ಮಾಡಿದ್ದರು. ಇದೀಗ ಅವರ ವಿರುದ್ಧದ ದೋಷಾರೋಪ ಸಾಬೀತಾದ ಹಿನ್ನೆಲೆ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments