Webdunia - Bharat's app for daily news and videos

Install App

ಅತ್ಯಾಚಾರದಿಂದ ಸಂತ್ರಸ್ತೆ ಮೃತಪಟ್ಟರೆ ಅಪರಾಧಿಗೆ ಮರಣದಂಡನೆ ಶಿಕ್ಷೆ: ಹೊಸ ಮಸೂದೆ ಮಂಡನೆ

Sampriya
ಮಂಗಳವಾರ, 3 ಸೆಪ್ಟಂಬರ್ 2024 (14:00 IST)
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ವಿಧಾನಸಭೆಯಲ್ಲಿ ಅತ್ಯಾಚಾರ ತಡೆ ಮಸೂದೆಯನ್ನು ಇಂದು ಮಂಡಿಸಿದೆ. ಆ ಮಸೂದೆಯಲ್ಲಿ ಅತ್ಯಾಚಾರ ತಡೆಗೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಕಾನೂನು ಸಚಿವ ಮೊಲೊಯ್ ಘಾಟಕ್ ಅವರು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿದರು. ಮಸೂದೆಯ ಬಗ್ಗೆ ವಿವಿಧ ಪಕ್ಷಗಳ ಶಾಸಕರಿಂದ ಚರ್ಚೆ ನಡೆಯಲಿದೆ.

ಪ್ರಸ್ತಾವಿತ ಮಸೂದೆ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಮೃತಪಟ್ಟರೆ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಅವಕಾಶ ಇದೆ. ಅಲ್ಲದೇ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ಅಪರಾಧಿಗಳಿಗೆ ಪೆರೋಲ್ ನೀಡದೆ ಜೀವಾವಧಿ ಶಿಕ್ಷೆಯನ್ನು ವಿಧಿಸುವ ಪ್ರಸ್ತಾವ ಮಸೂದೆಯಲ್ಲಿದೆ.

ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದ ಹೊಸ ಶಿಕ್ಷೆಗಳನ್ನು ಇದರಲ್ಲಿ ಪರಿಚಯಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಒತ್ತು ನೀಡುವ ಗುರಿಯನ್ನು ಇದು ಹೊಂದಿದೆ.

ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆ ಬಳಿಕ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಅದರ ಬೆನ್ನಲ್ಲೇ ಪಶ್ಚಿಮ ಬಂಗಾಲ ಸರ್ಕಾರ ಹೊಸ ಮಸೂದೆ ಮಂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ