Publish Date: Thu, 03 Aug 2023 (13:47 IST)
Updated Date: Thu, 03 Aug 2023 (14:44 IST)
ನವದೆಹಲಿ : ಮಣಿಪುರ ಹಿಂಸಾಚಾರ ವಿಚಾರಕ್ಕೆ ಸಂಬಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿರುದ್ಧ ವಿರೋಧ ಪಕ್ಷಗಳ ಒಕ್ಕೂಟ INDIA ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯನ್ನು ಆಗಸ್ಟ್ 8ರಿಂದ 10ರವರೆಗೆ ನಡೆಸಲು ನಿರ್ಧರಿಸಿದೆ.
ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 10 ರಂದು ಉತ್ತರ ನೀಡಲಿದ್ದಾರೆ. ವಿರೋಧ ಪಕ್ಷಗಳ ಪರವಾಗಿ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಅವಿಶ್ವಾಸ ನಿರ್ಣಯ ಮಂಡಿಸಿದರು.