Webdunia - Bharat's app for daily news and videos

Install App

ಡಿಸೆಂಬರ್ ತಮಿಳುನಾಡು ಪಾಲಿಗೆ ಅಪಶಕುನ?

Webdunia
ಬುಧವಾರ, 7 ಡಿಸೆಂಬರ್ 2016 (14:34 IST)
ಡಿಸೆಂಬರ್ ತಿಂಗಳು ತಮಿಳುನಾಡಿನ ಪಾಲಿಗೆ ಸದಾ ಅಪಶಕುನವಾಗಿ ಕಾಡುತ್ತದೆ ಎನ್ನಿಸುತ್ತದೆ. ವರ್ಷದ ಕೊನೆಯ ತಿಂಗಳಾದ ಡಿಸೆಂಬರ್‌ನಲ್ಲಿ ರಾಜ್ಯದಲ್ಲಿ ಒಂದಲ್ಲ ಅನಾಹುತಗಳು ಸಂಭವಿಸುತ್ತಲೇ ಇರುತ್ತವೆ. ಎಐಡಿಎಂಕೆ ನಾಯಕಿ, ರಾಜ್ಯದ ಜನರ ಪಾಲಿನ ಅಮ್ಮ ಎಂದೇ ಗುರುತಿಸಿಕೊಳ್ಳುವ ಜೆ. ಜಯಲಲಿತಾ ಸಾವಿನೊಂದಿಗೆ ಇದು ಮತ್ತೊಮ್ಮೆ ಸಾಬೀತಾಗಿದೆ. 
ತಮಿಳುನಾಡಿನ ಅನೇಕ ಪ್ರಸಿದ್ಧ ನಾಯಕರು ಇದೇ ತಿಂಗಳಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತೀಗ ಜಯಾ ಕೂಡ ಆ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. 
 
ಮದ್ರಾಸ್ ಪ್ರಾಂತ್ಯದ ಮುಖ್ಯಮಂತ್ರಿ, ಕೇಂದ್ರ ಗೃಹ ಸಚಿವ, ಭಾರತದ ಕೊನೆಯ ಗವರ್ನರ್ ಜನರಲ್ ಸಿ. ರಾಜಗೋಪಾಲಾಚಾರಿ 1972, ಡಿಸೆಂಬರ್ 25ರಂದು ಮರಣವನ್ನಪ್ಪಿದ್ದರು. ದ್ರಾವಿಡ ಚಳವಳಿ ನಾಯಕ 'ಪೆರಿಯಾರ' ಇ.ವಿ ರಾಮಸ್ವಾಮಿ ಡಿಸೆಂಬರ್ 24, 1972ರಲ್ಲಿ ಗತಿಸಿದ್ದರು. ಇಬ್ಬರಿಗೂ 94 ವರ್ಷ ವಯಸ್ಸಾಗಿದ್ದು ಧೀರ್ಘಕಾಲ ಕಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದರು.
 
ಜಯಲಲಿತಾ ರಾಜಕೀಯ ಗುರು, ನಟ  ಪರಿವರ್ತಿತ ರಾಜಕಾರಣಿ ಎಂಜಿಆರ್ ಸಾವನ್ನಪ್ಪಿದ್ದು ಕೂಡ ಡಿಸೆಂಬರ್ ತಿಂಗಳಲ್ಲಿಯೇ. 1987, ಡಿಸೆಂಬರ್ 24 ರಂದು ಮುಖ್ಯಮಂತ್ರಿಯಾಗಿದ್ದಾಗಲೇ ಅವರು ಕೊನೆಯುಸಿರೆಳೆದಿದ್ದರು. ಮತ್ತೀಗ ದುರಂತ ಕಾಕತಾಳೀಯ ಎಂಬಂತೆ ಅವರ ಶಿಷ್ಯೆ ಜಯಲಲಿತಾ ಕೂಡ ಇದೇ ತಿಂಗಳಲ್ಲಿ ಸಾವನ್ನಪ್ಪಿದ್ದಾರೆ. 
 
ಪ್ರಕೃತಿ ಕೂಡ ಈ ತಿಂಗಳಲ್ಲಿ ಚೆನ್ನೈ ಪಾಲಿಗೆ ಯಮಸದೃಶವಾಗಿ ಕಾಡಿದೆ. 2004 ಡಿಸೆಂಬರ್ 26 ರಂದು ಚೆನ್ನೈ ಕಡಲ ತಡಿಗೆ ಅಪ್ಪಳಿಸಿದ ಸುನಾಮಿ ನೂರಾರು ಜನರನ್ನು ಬಲಿ ಪಡೆದಿತ್ತು. 
 
ಇನ್ನು  ಭಾರಿ ಮಳೆಯಿಂದಾಗಿ ಚೆನ್ನೈ ಪ್ರವಾಹ ಪರಿಸ್ಥಿತಿ ಎದುರಿಸಿದ್ದೂ ಕಳೆದ ವರ್ಷ ಡಿಸೆಂಬರ್ 14ರಂದು.ಇದೀಗ, ತಮಿಳರ ಆರಾಧ್ಯ ದೈವ ಜಯಲಲಿತಾ ನಿಧನ, ತಮಿಳರ ಪಾಲಿಗೆ ಡಿಸೆಂಬರ್​ ಶೋಕಸಾಗರದಲ್ಲಿ ಮುಳುಗಿಸಿದೆ.
 
ಕಳೆದ ವರ್ಷ ಡಿಸೆಂಬರ್ ಮೊದಲ ವಾರ ಎದುರಾಗಿದ್ದ ಮಹಾಪ್ರವಾಹ ಚೆನ್ನೈ, ಕಾಂಚೀಪುರಮ್, ಕಡಲೂರು, ತಿರುವಳ್ಳೂರು, ತೂತುಕುಡಿಯನ್ನು ಸಾಕಷ್ಟು ನಲುಗಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ನ ಸರ್ವನಾಶಕ್ಕೆ ಕಾರಣವಾಗಿದ್ದು ಒಬ್ಬ ಮಹಿಳೆ, ಯಾರೀಕೆ

ಇರಾನ್ ಇಸ್ರೇಲ್ ಯುದ್ಧದಲ್ಲಿ ಪಾಕಿಸ್ತಾನಕ್ಕೆ ನಗಲೂ ಆಗದ ಅಳಲೂ ಆಗದ ಸ್ಥಿತಿ

Karnataka Weather: ಈ ವಾರ ಮಳೆಯಿದೆಯೇ, ಎಲ್ಲೆಗೆ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಮುಂದಿನ ಸುದ್ದಿ
Show comments