Webdunia - Bharat's app for daily news and videos

Install App

ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ!

Webdunia
ಬುಧವಾರ, 23 ಮಾರ್ಚ್ 2022 (11:21 IST)
ನವದೆಹಲಿ : ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ಮುಂದುವರಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ನಿರ್ಣಯ ಮಂಡಿಸಿದೆ.

ಇಂದು ಜಲ ಸಂಪನ್ಮೂಲ ಸಚಿವ ದುರೈ ಮುರುಗನ್ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಗೊತ್ತುವಳಿ ಮಂಡಿಸಿದ್ದಾರೆ.

ದುರೈ ಮುರುಗನ್ ಮಂಡಿಸಿದ ನಿರ್ಣಯಕ್ಕೆ ತಮಿಳನಾಡಿನ ಎಲ್ಲಾ ಪಕ್ಷಗಳು ಸಮ್ಮತಿ ಸೂಚಿಸಿ ಅಂಗೀಕರಿಸಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರಕ್ಕೆ ಒಕ್ಕೂರಲಿನಿಂದ ಆಗ್ರಹಿಸಿವೆ.

 
ಮೇಕೆದಾಟು ಯೋಜನೆ ಸುಪ್ರೀಂಕೋರ್ಟ್ನಲ್ಲಿದ್ದು, ವಿಚಾರಣೆ ಬಾಕಿ ಇರುವಾಗಲೇ ಕಾವೇರಿ ನೀರಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿತ್ತು.

ಇದಕ್ಕೆ ಠಕ್ಕರ್ ಕೊಡಲು ಹೊರಟ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಸರ್ಕಾರ, ಕೇಂದ್ರದಿಂದ ಅನುಮತಿ ಸಿಗದ ಯೋಜನೆಗೆ ಈ ಬಾರಿಯ ಬಜೆಟ್ನಲ್ಲಿ 1000 ಕೋಟಿ ಹಣವನ್ನು ಮೀಸಲಿಟ್ಟಿತ್ತು. 

ರಾಜ್ಯ ಸರ್ಕಾರದ ಇದೇ ನಿರ್ಧಾರವನ್ನು ಮುಂದಿಟ್ಟುಕೊಂಡು ಈಗ ತಮಿಳುನಾಡು ಹೋರಾಟ ಮುಂದುವರಿಸಿದೆ. ಒಂದು ಕಡೆ ಸುಪ್ರೀಂಕೋರ್ಟ್ನಲ್ಲಿ ಧಾವೆ ಹೂಡಿ ಯೋಜನೆಗೆ ಅನುಮತಿ ನೀಡದಂತೆ ಮನವಿ ಮಾಡುತ್ತಿರುವ ತಮಿಳುನಾಡು, ಮತ್ತೊಂದು ಕಡೆ ಯೋಜನೆಗೆ ಯಾವುದೇ ಅನುಮತಿಗಳು ನೀಡದಂತೆ ಕೇಂದ್ರ ಸರ್ಕಾರಕ್ಕೆ ನಿರಂತರ ಒತ್ತಡ ಹೇರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments