Webdunia - Bharat's app for daily news and videos

Install App

ಜಯಾ ನಿವಾಸ ಸ್ಮಾರಕವಾಗಿಸುವ ಸರಕಾರದ ತೀರ್ಮಾನಕ್ಕೆ ದೀಪಾ ವಿರೋಧ

Webdunia
ಶುಕ್ರವಾರ, 18 ಆಗಸ್ಟ್ 2017 (16:16 IST)
ದಿವಂಗತ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ನಿವಾಸವನ್ನು ಸ್ಮಾರಕವಾಗಿ ಪರಿವರ್ತಿಸುವ ತಮಿಳುನಾಡು ಸರಕಾರದ ನಿರ್ಧಾರವನ್ನು ಜಯಾ ಸೋದರ ಸೊಸೆ ಜೆ.ದೀಪಾ ವಿರೋದಿಸಿದ್ದು ಸರಕಾರದ ನಿರ್ಧಾರವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಹೇಳಿದ್ದಾರೆ.
ಕಳೆದ ಗುರುವಾರ, ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಜಯಲಲಿತಾ ಮರಣದ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ನೇಮಕ ಮಾಡುವುದಲ್ಲದೇ ಜಯಲಲಿತಾ ಅವರ ವೇದ ನಿಲಯಂ ನಿವಾಸವನ್ನು ಸ್ಮಾರಕವಾಗಿ ಪರಿವರ್ತಿಸುವುದಾಗಿ ಘೋಷಿಸಿದ್ದರು.
 
ಮುಖ್ಯಮಂತ್ರಿ ಪಳನಿಸ್ವಾಮಿ ಪೊಯೀಸ್ ಗಾರ್ಡನ್ ಆಸ್ತಿಯನ್ನು ಸ್ಮಾರಕವಾಗಿ ಘೋಷಿಸುವ ಹಿಂದೆ ಏನೋ ಉದ್ದೇಶವಿದೆ. ನನಗೆ ಜಯಲಲಿತಾ ನಿವಾಸದ ಮೇಲೆ ಹಕ್ಕು ಸಾಧಿಸಲು ನೈತಿಕ ಮತ್ತು ಕಾನೂನುಬದ್ಧವಾದ ಹಕ್ಕಿದೆ ಎಂದು ತಿರುಗೇಟು ನೀಡಿದ್ದಾರೆ. 
 
ಜಯಲಲಿತಾ ನಿವಾಸವನ್ನು ಸ್ಮಾರಕವಾಗಿ ಪರಿವರ್ತಿಸುವ ಬಗ್ಗೆ ಸರಕಾರ ನಮ್ಮೊಂದಿಗೆ ಸಂಪರ್ಕಿಸಿಲ್ಲ. ನಮ್ಮನ್ನು ಸಂಪರ್ಕಿಸದೆ ತೀರ್ಮಾನ ತೆಗೆದುಕೊಂಡಿದೆ. ಸರಕಾರದ ನಡೆಯ ವಿರುದ್ಧ ಕೋರ್ಟ್‌ನಲ್ಲಿ ದಾವೆ ಹೂಡುತ್ತೇವೆ ಎಂದು ತಿಳಿಸಿದ್ದಾರೆ.
 
ಮಾಜಿ ಸಿಎಂ ದಿವಂಗತ ಜಯಲಲಿತಾ ನಿಧನವಾದ ಹಲವು ತಿಂಗಳುಗಳ ನಂತರ ದೀಪಾ, ಜಯಲಲಿತಾ ಜನ್ಮದಿನದಂದು ಎಂಜಿಆರ್ ಅಮ್ಮಾ ದೀಪಾ ಪೆರಾವೈ ಎನ್ನುವ ರಾಜಕೀಯ ಸಂಘಟನೆ ಸ್ಥಾಪಿಸಿದ್ದರು.
 
ಜಯಲಲಿತಾ ನಿಧನದಿಂದ ತೆರವಾಗಿದ್ದ ಆರ್‌.ಕೆ.ನಗರ್ ವಿಧಾನಸಭೆ ಉಪ ಚುನಾವಣೆಗಾಗಿ ಕಳೆದ ಏಪ್ರಿಲ್ 12 ರಂದು ದೀಪಾ ನಾಮಪತ್ರ ಸಲ್ಲಿಸಿದ್ದರು. ಆದರೆ, ಚುನಾವಣೆಯಲ್ಲಿ ಹಣದ ದುರ್ಬಳಕೆ ನಡೆದಿದೆ ಎನ್ನುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಚುನಾವಣೆಯನ್ನು ರದ್ದುಗೊಳಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments