Webdunia - Bharat's app for daily news and videos

Install App

ಮಾನನಷ್ಟ ಮೊಕದ್ದಮೆ: ರಾಹುಲ್‌ಗೆ ರಿಲೀಫ್

Webdunia
ಶುಕ್ರವಾರ, 30 ಸೆಪ್ಟಂಬರ್ 2016 (15:54 IST)
ರಾಷ್ಟ್ರೀಯ ಸ್ವಯಂ ಸೇವಕ ಸಂಘ ತಮ್ಮ ವಿರುದ್ಧ ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಗುವಾಹಟಿಯ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿದ್ದರು. ವೈಯಕ್ತಿಕ ಭದ್ರತೆ ಆಧಾರದ ಮೇಲೆ  ರಾಹುಲ್ ಅವರಿಗೆ ಜಾಮೀನು ನೀಡಿರುವ ಮುಖ್ಯ ಜುಡಿಸಿಯಲ್ ಮ್ಯಾಜಿಸ್ಟ್ರೇಟ್ ಮುಂದಿನ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ. 
ಆರ್‌ಎಸ್ಎಸ್ ಕಾರ್ಯಕರ್ತರೊಬ್ಬರು ಕಳೆದ ವರ್ಷ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು. ಹಲವು ಸಾಕ್ಷ್ಯಿಗಳನ್ನು ವಿಚಾರಣೆಗೊಳಪಡಿಸಿದ ಬಳಿಕ ಕೋರ್ಟ್ ಸೆಪ್ಟೆಂಬರ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಸೂಚಿಸಿದ್ದರು.
 
ಏನಿದು ಪ್ರಕರಣ: 
 
ಕಳೆದ ವರ್ಷ ಆಸ್ಸಾಂನ ಬರ್ಪೆಟಾ ಸತ್ರಾಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ರೋಡ್ ಶೋನಲ್ಲಿ ಪಾಲ್ಗೊಳ್ಳುವ ಮುನ್ನ 16 ಶತಮಾನಕ್ಕೆ ಸೇರಿದ ವೈಷ್ಣವ ದೇವಾಲಯಕ್ಕೆ ಭೇಟಿ ನೀಡಬೇಕಿತ್ತು. ಆದರೆ ದೇವಸ್ಥಾನಕ್ಕೆ ಭೇಟಿ ನೀಡದೆ ರಾಹುಲ್ ನೇರವಾಗಿ ರೋಡ್ ಶೋ ನಡೆಸಲು ತೆರಳಿದ್ದರು. 
 
ಅಲ್ಲಿಂದ ನವದೆಹಲಿಗೆ ಹಿಂತಿರುಗಿದ ಬಳಿಕ ಮಾಧ್ಯಮದವರೊಂದಿಗೆ ಮಾತನ್ನಾಡುತ್ತಿದ್ದ ರಾಹುಲ್, ಸ್ಥಳೀಯ ಮಹಿಳೆಯರನ್ನು ಬಳಸಿಕೊಂಡು ಆರ್‌ಎಸ್ಎಸ್ ಕಾರ್ಯಕರ್ತರು ನನ್ನನ್ನು ದೇವಸ್ಥಾನದ ಒಳಗೆ ಹೋಗದಂತೆ ತಡೆದರು ಎಂದು ಆರೋಪಿಸಿದ್ದರು.
 
ಆದರೆ ರಾಹುಲ್ ಆರೋಪದಲ್ಲಿ ಹುರುಳಿಲ್ಲ. ಈ ಮೂಲಕ ರಾಹುಲ್ ಸಂಘಕ್ಕೆ ಮತ್ತು ದೇವಸ್ಥಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಸಂಘದ ಕಾರ್ಯಕರ್ತನೊಬ್ಬ ಕೋರ್ಟ್ ಮೆಟ್ಟಿಲೇರಿದ್ದ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments