ದೆಹಲಿ ಆಶ್ರಮ ಲೈಂಗಿಕ ದೌರ್ಜನ್ಯ: ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ ಅಲ್ಲ

Sampriya
ಸೋಮವಾರ, 13 ಅಕ್ಟೋಬರ್ 2025 (21:21 IST)
Photo Credit X
ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ ಅಲ್ಲ ಮತ್ತು ಅವರು ಜೈಲಿನಲ್ಲಿ ಖಾವಿ ಧರಿಸುವುದರಿಂದ ಕಾನೂನು, ಸುವ್ಯವಸ್ಥೆ ಸಮಸ್ಯೆಯಾಗಬಹುದು ಎಂದು ಅರ್ಜಿ ವಿಚಾರಣೆ ವೇಳೆ  ಹೆಚ್ಚುವರಿ ಸಾರ್ವಜನಿಕ ಅಭಿಯೋಜಕ(ಎಪಿಪಿ) ಹೇಳಿದರು.

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಚೈತನ್ಯಾನಂದ ಸರಸ್ವತಿ ಪರ ವಕೀಲರಾದ ಮನೀಶ್ ಗಾಂಧಿ ಅವರು, ಜೈಲಿನಲ್ಲಿ ತಮ್ಮ ಆಯ್ಕೆಯ ಬಟ್ಟೆಗಳನ್ನು ಧರಿಸುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಹೇಗೆ ಉಂಟಾಗುತ್ತದೆ. ಇದು ನಮ್ಮ ತಿಳುವಳಿಕೆಗೆ ಮೀರಿದ್ದು ಎಂದು ವಾದಿಸಿದರು.

ಅದಲ್ಲದೆ ಸರಸ್ವತಿ ಅವರು ಸನ್ಯಾಸಿಯಾಗಿದ್ದು, ಅವರಿಗೆ ದೀಕ್ಷೆ ನೀಡಲಾಗಿದೆ.  ಅವರ ಹಿಂದಿನ ಹೆಸರು ಪಾರ್ಥಸಾರಥಿ. ದೀಕ್ಷೆ ಪಡೆದ ನಂತರ, ಅವರ ಹೆಸರನ್ನು ಚೈತನ್ಯಾನಂದ ಸರಸ್ವತಿ ಎಂದು ಬದಲಾಯಿಸಲಾಯಿತು. ಈ ನಿಲುವನ್ನು ಮಠ ಪ್ರಶ್ನಿಸಿಲ್ಲ ಎಂದರು.

ಇದೀಗ ಚೈತನ್ಯಾನಂದ ಸರಸ್ವತಿ ದೀಕ್ಷೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ಆರೋಪಿ ಪರ ವಕೀಲ ಗಾಂಧಿ ಸಮಯ ಕೋರಿದ್ದಾರೆ. ನ್ಯಾಯಾಲಯವು ಸಮಯ ನೀಡಿ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30 ಕ್ಕೆ ನಿಗದಿಪಡಿಸಿತು.

ಚೈತನ್ಯಾನಂದ ಸರಸ್ವತಿ ಅವರು ಸನ್ಯಾಸಿ ಅಲ್ಲ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದಾರೆ. ಚೈತನ್ಯಾನಂದ ಸರಸ್ವತಿ ಅವರು ಪಟಿಯಾಲ ಹೌಸ್ ಕೋರ್ಟ್‌ನಲ್ಲಿ ಸಲ್ಲಿಸಿದ ಮನವಿಗೆ ಪೊಲೀಸರು ನೀಡಿದ ಉತ್ತರದಲ್ಲಿ ಈ ಹೇಳಿಕೆ ನೀಡಲಾಗಿದೆ.

 ಸನ್ಯಾಸಿ ನಿಲುವಂಗಿಯನ್ನು ಧರಿಸಲು ಮತ್ತು ಧಾರ್ಮಿಕ ಪುಸ್ತಕಗಳನ್ನು ನ್ಯಾಯಾಂಗ ಬಂಧನದಲ್ಲಿಡಲು ಜೈಲು ಅಧಿಕಾರಿಗಳಿಂದ ನಿರ್ದೇಶನವನ್ನು ಅವರು ಕೋರಿದ್ದಾರೆ. ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಿರುಕುಳ ಪ್ರಕರಣದಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ (ಜೆಎಂಎಫ್‌ಸಿ) ಅನಿಮೇಶ್ ಕುಮಾರ್ ಅವರು ಹೆಚ್ಚುವರಿ ಸರ್ಕಾರಿ ಅಭಿಯೋಜಕರ (ಎಪಿಪಿ) ವಾದವನ್ನು ಆಲಿಸಿದರು. ಚೈತ್ನ್ಯಾಾನಂದ ಸರಸ್ವತಿ ಅವರು ಸನ್ಯಾಸಿಯಲ್ಲ ಎಂದು ಎಪಿಪಿ ಹೇಳಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ