ಗುಜರಾತ್ ದಂಗೆಯನ್ನು ಬಂಗಾಳ ದಂಗೆಯೆಂದು ಬಿಂಬಿಸಿದ ಬಿಜೆಪಿ ನಾಯಕಿ

Webdunia
ಸೋಮವಾರ, 10 ಜುಲೈ 2017 (16:32 IST)
ಕಳೆದ 2002ರಲ್ಲಿ ನಡೆದ ಗುಜರಾತ್ ದಂಗೆಯ ಚಿತ್ರಗಳನ್ನು ಪಶ್ಚಿಮ ಬಂಗಾಳದ ಬಸೀರ್‌ಹಾಟ್ ದಂಗೆಯ ಚಿತ್ರಗಳು ಎಂದು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದ ದೆಹಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ, ಟ್ವಿಟ್ಟರ್ ಖಾತೆದಾರರು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಬಸೀರ್‌ಹಾಟ್ ಹಿಂಸಾಚಾರದಿಂದ ನಿದ್ರೆಯಿಲ್ಲದೇ ರಾತ್ರಿಗಳನ್ನು ಕಳೆಯುತ್ತಿದ್ದೇವೆ. ಪೋಸ್ಟ್ ಮಾಡಿರುವ ಚಿತ್ರಗಳನ್ನು ಪಶ್ಚಿಮ ಬಂಗಾಳ ಪೊಲೀಸರು ಗಮನಿಸುತ್ತಾರೆ ಎಂದು ಭಾವಿಸಿದ್ದಾಗಿ ಪೋಸ್ಟ್ ಮಾಡಿ, ಅದರೊಂದಿಗೆ ಹಿಂಸಾಚಾರದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
 
 ಬಿಜೆಪಿ ನಾಯಕಿ ನೂಪುರ್ ಶರ್ಮಾ ಪೋಸ್ಟ್ ಮಾಡಿದ ಚಿತ್ರಗಳು 2002ರ ಗುಜರಾತ್ ದಂಗೆಯ ಚಿತ್ರಗಳಾಗಿದ್ದು, ಸುಳ್ಳು ವರದಿಗಳನ್ನು ಹರಡುತ್ತಿದ್ದಾರೆ ಎಂದು ಟ್ವಿಟ್ಟರ್ ಖಾತೆದಾರರು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಟ್ವಿಟ್ಟರ್ ಖಾತೆದಾರರು ಸತ್ಯ ಬಹಿರಂಗಪಡಿಸಿದ್ದರಿಂದ ಉಲ್ಟಾ ಹೊಡೆದ ಶರ್ಮಾ, ಸ್ಥಳ ಯಾವುದೇ ಆಗಲಿ ಬಂಗಾಳದ ಹಿಂಸಾಚಾರವನ್ನು ಪ್ರತಿಫಲಿಸುತ್ತದೆ. ಇವತ್ತಿಗೂ ಬಂಗಾಳದಲ್ಲಿ ಮೌನವೇ ರಾಗವಾಗಿದೆ ಎಂದು ತಿಳಿಸಿದ್ದಾರೆ.
 
ಹಲವು ಟ್ವಿಟ್ಟರ್ ಬಳಕೆದಾರರು ದೆಹಲಿ ಪೊಲೀಸರ ಗಮನವನ್ನು ಟ್ವೀಟರ್‌ಗೆ ಸೆಳೆಯಲು ಪ್ರಯತ್ನಿಸಿ ಕೂಡಲೇ ಬಿಜೆಪಿ ನಾಯಕಿ ನೂಪುರ್ ಶರ್ಮಾರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments