Webdunia - Bharat's app for daily news and videos

Install App

ಗುಜರಾತ್ ದಂಗೆಯನ್ನು ಬಂಗಾಳ ದಂಗೆಯೆಂದು ಬಿಂಬಿಸಿದ ಬಿಜೆಪಿ ನಾಯಕಿ

Webdunia
ಸೋಮವಾರ, 10 ಜುಲೈ 2017 (16:32 IST)
ಕಳೆದ 2002ರಲ್ಲಿ ನಡೆದ ಗುಜರಾತ್ ದಂಗೆಯ ಚಿತ್ರಗಳನ್ನು ಪಶ್ಚಿಮ ಬಂಗಾಳದ ಬಸೀರ್‌ಹಾಟ್ ದಂಗೆಯ ಚಿತ್ರಗಳು ಎಂದು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದ ದೆಹಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ, ಟ್ವಿಟ್ಟರ್ ಖಾತೆದಾರರು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಬಸೀರ್‌ಹಾಟ್ ಹಿಂಸಾಚಾರದಿಂದ ನಿದ್ರೆಯಿಲ್ಲದೇ ರಾತ್ರಿಗಳನ್ನು ಕಳೆಯುತ್ತಿದ್ದೇವೆ. ಪೋಸ್ಟ್ ಮಾಡಿರುವ ಚಿತ್ರಗಳನ್ನು ಪಶ್ಚಿಮ ಬಂಗಾಳ ಪೊಲೀಸರು ಗಮನಿಸುತ್ತಾರೆ ಎಂದು ಭಾವಿಸಿದ್ದಾಗಿ ಪೋಸ್ಟ್ ಮಾಡಿ, ಅದರೊಂದಿಗೆ ಹಿಂಸಾಚಾರದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
 
 ಬಿಜೆಪಿ ನಾಯಕಿ ನೂಪುರ್ ಶರ್ಮಾ ಪೋಸ್ಟ್ ಮಾಡಿದ ಚಿತ್ರಗಳು 2002ರ ಗುಜರಾತ್ ದಂಗೆಯ ಚಿತ್ರಗಳಾಗಿದ್ದು, ಸುಳ್ಳು ವರದಿಗಳನ್ನು ಹರಡುತ್ತಿದ್ದಾರೆ ಎಂದು ಟ್ವಿಟ್ಟರ್ ಖಾತೆದಾರರು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಟ್ವಿಟ್ಟರ್ ಖಾತೆದಾರರು ಸತ್ಯ ಬಹಿರಂಗಪಡಿಸಿದ್ದರಿಂದ ಉಲ್ಟಾ ಹೊಡೆದ ಶರ್ಮಾ, ಸ್ಥಳ ಯಾವುದೇ ಆಗಲಿ ಬಂಗಾಳದ ಹಿಂಸಾಚಾರವನ್ನು ಪ್ರತಿಫಲಿಸುತ್ತದೆ. ಇವತ್ತಿಗೂ ಬಂಗಾಳದಲ್ಲಿ ಮೌನವೇ ರಾಗವಾಗಿದೆ ಎಂದು ತಿಳಿಸಿದ್ದಾರೆ.
 
ಹಲವು ಟ್ವಿಟ್ಟರ್ ಬಳಕೆದಾರರು ದೆಹಲಿ ಪೊಲೀಸರ ಗಮನವನ್ನು ಟ್ವೀಟರ್‌ಗೆ ಸೆಳೆಯಲು ಪ್ರಯತ್ನಿಸಿ ಕೂಡಲೇ ಬಿಜೆಪಿ ನಾಯಕಿ ನೂಪುರ್ ಶರ್ಮಾರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಮುಂದಿನ ಸುದ್ದಿ
Show comments