ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

Krishnaveni K
ಮಂಗಳವಾರ, 11 ನವೆಂಬರ್ 2025 (11:44 IST)
ದೆಹಲಿ: ನಿನ್ನೆ ಸಂಜೆ ದೆಹಲಿಯ ಕೆಂಪು ಕೋಟೆ ಬಳಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಮಹತ್ವದ ಮಾಹಿತಿ ಬಂದಿದೆ. ಸ್ಪೋಟಕ್ಕೆ ಕೆಲವೇ ತಾಸು ಮೊದಲು ಉಗ್ರ ಸಂಘಟನೆಗೆ ಸೇರಿದ ಇಬ್ಬರನ್ನು ಸ್ಪೋಟಕಗಳ ಸಮೇತ ಬಂಧಿಸಿದ ಬಳಿಕ ದಾಳಿ ನಡೆದಿತ್ತು.

ನಿನ್ನೆ ಕಾಶ್ಮೀರ, ಹರ್ಯಾಣದಲ್ಲಿ ಸಕ್ರಿಯವಾಗಿದ್ದ ವೈಟ್ ಕಾಲರ್ ಉಗ್ರರಿಬ್ಬರನ್ನು ಸೆರೆ ಹಿಡಿಯಲಾಗಿತ್ತು. ಡಾ ಆದಿಲ್ ಮತ್ತು ಡಾ ಮುಜಮ್ಮಿಲ್ ಎಂಬಿಬ್ಬರು ಉಗ್ರರನ್ನು ಸೆರೆ ಹಿಡಿಯಲಾಗಿತ್ತು. ಜೊತೆಗೆ 2900 ಕೆ.ಜಿ. ಸ್ಪೋಟಕ ವಶಪಡಿಸಿಕೊಳ್ಳಲಾಗಿತ್ತು.

ಇದಾದ ಕೆಲವೇ ತಾಸುಗಳಲ್ಲಿ ದೆಹಲಿಯಲ್ಲಿ ಸ್ಪೋಟ ನಡೆದಿದೆ. ಐ20 ಕಾರಿನಲ್ಲಿ ಡಾ ಉಮರ್ ಯು ನಬಿ ಎಂಬಾತ ಸೂಸೈಡ್ ಬಾಂಬರ್ ಆಗಿ ಸ್ಪೋಟಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇಬ್ಬರು ವೈದ್ಯ ಉಗ್ರರನ್ನು ಸೆರೆ ಹಿಡಿದ ಸೇಡಿಗೆ ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ.

ಇದೀಗ ಸ್ಥಳದಲ್ಲಿ ಪತ್ತೆಯಾದ ಕೈಗಳನ್ನು ಪೊಲೀಸರು ಡಿಎನ್ಎ ಪರೀಕ್ಷೆಗೊಳಪಡಿಸುತ್ತಿದ್ದಾರೆ. ಇದು ಆತ್ಮಾಹುತಿ ಬಾಂಬರ್ ನದ್ದೇ ಕೈಗಳಿರಬಹುದು ಎಂದು ಶಂಕಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments