Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ನವದೆಹಲಿ , ಸೋಮವಾರ, 16 ಜುಲೈ 2018 (13:22 IST)
ನವದೆಹಲಿ : ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಪಕ್ಷ ಕೇವಲ ಮುಸ್ಲಿಮರಿಗಾಗಿ ಮಾತ್ರ ಕೆಲಸ ಮಾಡುವ ಪಕ್ಷವಾಗಿದೆ ಎಂದು ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹಿಂದೂ-ಮುಸ್ಲಿಂ ಬಾಂಧವ್ಯದಿಂದ ಮಾತ್ರವೇ ಭಾರತ ನಂಬರ್ ಒನ್ ಆಗುತ್ತದೆ ಎಂದು ಹೇಳಿದ್ದಾರೆ.


ಇಂದೋರ್ ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು,’ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಾಲ್ಕು ವರ್ಷಗಳ ಬಳಿಕವೂ ಪ್ರಧಾನಿ ಮೋದಿ ಹಿಂದೂ-ಮುಸ್ಲಿಂ ಸಮಸ್ಯೆಗಳ ಕುರಿತು ಮಾತನಾಡುತ್ತಿದ್ದಾರೆ ಎಂದರೆ ಅವರ ಸಾಧನೆ ಏನು? ಕಳೆದ ನಾಲ್ಕು ವರ್ಷಗಳಲ್ಲಿ ಅವರ ಸರ್ಕಾರ ಏನು ಮಾಡುತ್ತಿತ್ತು ಎಂದು ಟೀಕಿಸಿದ್ದಾರೆ.


ಹಾಗೇ ‘ಪ್ರಧಾನಿ ಮೋದಿ ಅವರ ಮಾತು ಕೇಳಿದರೆ ಅವರ ಸರ್ಕಾರ ಇನ್ನೂ ಯಾವ ಕೆಲಸವನ್ನೂ ಮಾಡಿಲ್ಲ ಎಂದೆನಿಸುತ್ತಿದೆ. ತ್ರಿವಳಿ ತಲಾಖ್ ಬಗ್ಗೆ ತಮ್ಮ ಸಾಧನೆಯ ಬಗ್ಗೆ ಮಾತನಾಡುವ ಮೋದಿ, ತಮ್ಮದೇ ಪಕ್ಷ ಪ್ರತಿಪಕ್ಷ ಸ್ಥಾನದಲ್ಲಿದ್ದಾಗ ತ್ರಿವಳಿ ತಲ್ಲಾಖ್ ಗೆ ಬೆಂಬಲ ನೀಡಬಹುದಿತ್ತು, ಅಂದು ಬೆಂಬಲ ನೀಡದೇ ತಮ್ಮ ರಾಜಕೀಯ ಲಾಭಕ್ಕಾಗಿ ಅದನ್ನು ಬಿಜೆಪಿ ಬಳಸಿಕೊಂಡಿತು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹದಿನೈದು ದಿನಗಳಿಂದ ಸೂರ್ಯನನ್ನೇ ಕಾಣದ ಜನರು…!