Select Your Language

Notifications

webdunia
webdunia
webdunia
webdunia

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾರು ಕಳುವು

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾರು ಕಳುವು
ನವದೆಹಲಿ , ಗುರುವಾರ, 12 ಅಕ್ಟೋಬರ್ 2017 (18:38 IST)
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾರು ಕಳ್ಳತನವಾಗಿದ್ದು ಪೊಲೀಸ್ ಠಾಣೆದೆ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಹುದ್ದೆ ಅಲಂಕರಿಸುವ ಮುನ್ನ ಆರ್.ವ್ಯಾಗನ್ ಕಾರು ಬಳಸುತ್ತಿದ್ದರು. ಇದೀಗ ಕಾರು ಕಳ್ಳತನವಾಗಿದ್ದರಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
 
ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಅವರೊಂದಿಗೆ ಚಳುವಳಿಯಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಕೇಜ್ರಿವಾಲ್, ವ್ಯಾಗನ್ ಕಾರು ಉಪಯೋಗಿಸುತ್ತಿದ್ದರು. ನಂತರ ಸಿಎಂ ಆದ ಬಳಿಕ ಸರಕಾರಿ ಕಾರು ಬಳಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.  
 
ಸಿಎಂ ಕೇಜ್ರಿವಾಲ್ ದೂರು ದಾಖಲಿಸಿಕೊಂಡಿರುವ ಪೊಲೀಸರು ಕಾರು ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ನಾಯಕತ್ವಕ್ಕೆ ನಾವೆಲ್ಲಾ ಬದ್ಧ: ಜಿ.ಪರಮೇಶ್ವರ್