Webdunia - Bharat's app for daily news and videos

Install App

ದೆಹಲಿ ಕೋಚಿಂಗ್ ಸೆಂಟರ್ ದುರಂತ, ಮತ್ತೇ ಐವರನ್ನು ಬಂಧಿಸಿದ ಪೊಲೀಸರು

Sampriya
ಸೋಮವಾರ, 29 ಜುಲೈ 2024 (12:11 IST)
Photo Courtesy X
ನವದೆಹಲಿ: ಇಲ್ಲಿನ ಓಲ್ಡ್ ರಾಜಿಂದರ್ ನಗರದಲ್ಲಿ ಐಎಎಸ್ ಕೋಚಿಂಗ್ ಸೆಂಟರ್‌ಗೆ ನೀರು ನುಗ್ಗಿ ಮೂವರು ಐಎಎಸ್ ಆಕಾಂಕ್ಷಿಗಳು ಮೃತಪಟ್ಟ ಪ್ರಕರಣ ಸಂಬಂಧ ಇದೀಗ ಪೊಲೀಸರು ಮತ್ತೇ ಐವರನ್ನು ಬಂಧಿಸಿದ್ದಾರೆ.

ಡಿಸಿಪಿ (ಕೇಂದ್ರ) ಎಂ ಹರ್ಷ ವರ್ಧನ್ ಅವರು ಎಎನ್‌ಐ ಜತೆ ಮಾತನಾಡಿ,  ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಅವಘಡಕ್ಕೆ ಸಂಬಂಧಿಸಿದಂತೆ ಮತ್ತೇ ಐವರನ್ನು ಬಂಧಿಸಲಾಗಿದೆ. ಈ ಘಟನೆಯಲ್ಲಿ ಯಾರೇ ತಪ್ಪು ಮಾಡಿದರೂ ಬಿಡುವುದಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ ಹಾಗೂ ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ ಎಂದರು.

ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಬಂಧಿತರಲ್ಲಿ ಕಟ್ಟಡದ ಮಾಲೀಕರೂ ಸೇರಿದ್ದಾರೆ.

ಶನಿವಾರ ಸುರಿದ ಭಾರೀ ಮಳೆಗೆ ಹಳೆ ರಾಜಿಂದರ್ ನಗರದ ರಾವು ಸ್ಟಡಿ ಸರ್ಕಲ್‌ನಲ್ಲಿನೆಲಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್‌ಗೆ ನೀರು ನುಗ್ಗಿದೆ. ಘಟನೆಯಲ್ಲಿ ಮೂವರು ಐಎಎಸ್ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ/

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments