Webdunia - Bharat's app for daily news and videos

Install App

ದೆಹಲಿ ಗದ್ದುಗೆ ಹೋಯ್ತು, ಆದ್ರೂ ಮುಖ್ಯಮಂತ್ರಿಯಾಗಲಿದ್ದಾರೆ ಕೇಜ್ರಿವಾಲ್ ಹೇಗೆ ಗೊತ್ತಾ

Krishnaveni K
ಭಾನುವಾರ, 9 ಫೆಬ್ರವರಿ 2025 (12:10 IST)
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಎಎಪಿ ಪಕ್ಷದ ನಾಯಕ ಅರವಿಂದ್ ದೆಹಲಿ ಗದ್ದುಗೆ ಹೋದರೂ ಸಿಎಂ ಆಗುವ ಸಾಧ್ಯತೆಯಿದೆ. ಹೇಗೆ ಅಂತೀರಾ ಇಲ್ಲಿ ನೋಡಿ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕೇವಲ 22 ಸ್ಥಾನಗಳನ್ನು ಗೆದ್ದುಕೊಂಡ ಆಡಳಿತಾರೂಢ ಆಪ್ ಅಧಿಕಾರ ಕಳೆದುಕೊಂಡಿದೆ. ದೆಹಲಿ ಅಬಕಾರಿ ಅಕ್ರಮ ಹಗರಣ ಆರೋಪದಲ್ಲಿ ಜೈಲಿನಲ್ಲಿದ್ದರೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡದ ಅರವಿಂದ್ ಕೇಜ್ರಿವಾಲ್ ಬೇಲ್ ಮೇಲೆ ಹೊರಗೆ ಬಂದ ಮೇಲೆ ರಾಜೀನಾಮೆ ಕೊಟ್ಟು ತಮ್ಮ ಆಪ್ತೆ ಅತಿಶಿ ಕೈಗೆ ಅಧಿಕಾರ ಕೊಟ್ಟಿದ್ದರು.

ಈ ಬಾರಿ ಚುನಾವಣೆಯಲ್ಲಿ ಗೆದ್ದು ಮತ್ತೆ ದೆಹಲಿ ಸಿಎಂ ಆಗುವ ಕನಸು ಹೊತ್ತಿದ್ದರು. ಆದರೆ ಆಪ್ ಪಕ್ಷ ಮಾತ್ರವಲ್ಲ ಸ್ವತಃ ಕೇಜ್ರಿವಾಲ್ ಸೋತು ಸುಣ್ಣವಾಗಿದ್ದಾರೆ. ಹೀಗಾಗಿ ಈಗ ಕೇಜ್ರಿವಾಲ್ ಸಿಎಂ ಕನಸು ನುಚ್ಚು ನೂರಾಗಿದೆ.

ಹೀಗಾಗಿ ಈಗ ಪಂಜಾಬ್ ಮುಖ್ಯಮಂತ್ರಿ ಸ್ಥಾನದ ಮೇಲೆ ಕೇಜ್ರಿವಾಲ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಆಪ್ ಪಕ್ಷದ ಪರಮೋಚ್ಛ ನಾಯಕ ಕೇಜ್ರಿವಾಲ್. ಅವರ ಪಕ್ಷವೇ ಪಂಜಾಬ್ ನಲ್ಲಿ ಅಧಿಕಾರದಲ್ಲಿದೆ.

ಹೀಗಾಗಿ ಈಗ ತಮ್ಮ ಗುರು ಕೇಜ್ರಿವಾಲ್ ಗಾಗಿ ಪಂಜಾಬ್ ನ ಹಾಲಿ ಸಿಎಂ ಭಗವಂತ್ ಮಾನ್ ಸಿಂಗ್ ಅಧಿಕಾರ ಬಿಟ್ಟುಕೊಡಬಹುದು ಎಂಬ ಸುದ್ದಿ ಹಬ್ಬಿದೆ. ದೆಹಲಿ ಹೋದರೆ ಪಂಜಾಬ್ ನಲ್ಲಾದರೂ ಮತ್ತೆ ಮುಖ್ಯಮಂತ್ರಿಯಾಗುವ ಹವಣಿಕೆಯಲ್ಲಿ ಕೇಜ್ರಿವಾಲ್ ಇದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೆ ಪಂಜಾಬ್ ನ ಆಪ್ ನಾಯಕರ ಅಭಿಪ್ರಾಯ ಮುಖ್ಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments