Webdunia - Bharat's app for daily news and videos

Install App

ದೆಹಲಿ ಗದ್ದುಗೆ ಹೋಯ್ತು, ಆದ್ರೂ ಮುಖ್ಯಮಂತ್ರಿಯಾಗಲಿದ್ದಾರೆ ಕೇಜ್ರಿವಾಲ್ ಹೇಗೆ ಗೊತ್ತಾ

Krishnaveni K
ಭಾನುವಾರ, 9 ಫೆಬ್ರವರಿ 2025 (12:10 IST)
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಎಎಪಿ ಪಕ್ಷದ ನಾಯಕ ಅರವಿಂದ್ ದೆಹಲಿ ಗದ್ದುಗೆ ಹೋದರೂ ಸಿಎಂ ಆಗುವ ಸಾಧ್ಯತೆಯಿದೆ. ಹೇಗೆ ಅಂತೀರಾ ಇಲ್ಲಿ ನೋಡಿ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕೇವಲ 22 ಸ್ಥಾನಗಳನ್ನು ಗೆದ್ದುಕೊಂಡ ಆಡಳಿತಾರೂಢ ಆಪ್ ಅಧಿಕಾರ ಕಳೆದುಕೊಂಡಿದೆ. ದೆಹಲಿ ಅಬಕಾರಿ ಅಕ್ರಮ ಹಗರಣ ಆರೋಪದಲ್ಲಿ ಜೈಲಿನಲ್ಲಿದ್ದರೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡದ ಅರವಿಂದ್ ಕೇಜ್ರಿವಾಲ್ ಬೇಲ್ ಮೇಲೆ ಹೊರಗೆ ಬಂದ ಮೇಲೆ ರಾಜೀನಾಮೆ ಕೊಟ್ಟು ತಮ್ಮ ಆಪ್ತೆ ಅತಿಶಿ ಕೈಗೆ ಅಧಿಕಾರ ಕೊಟ್ಟಿದ್ದರು.

ಈ ಬಾರಿ ಚುನಾವಣೆಯಲ್ಲಿ ಗೆದ್ದು ಮತ್ತೆ ದೆಹಲಿ ಸಿಎಂ ಆಗುವ ಕನಸು ಹೊತ್ತಿದ್ದರು. ಆದರೆ ಆಪ್ ಪಕ್ಷ ಮಾತ್ರವಲ್ಲ ಸ್ವತಃ ಕೇಜ್ರಿವಾಲ್ ಸೋತು ಸುಣ್ಣವಾಗಿದ್ದಾರೆ. ಹೀಗಾಗಿ ಈಗ ಕೇಜ್ರಿವಾಲ್ ಸಿಎಂ ಕನಸು ನುಚ್ಚು ನೂರಾಗಿದೆ.

ಹೀಗಾಗಿ ಈಗ ಪಂಜಾಬ್ ಮುಖ್ಯಮಂತ್ರಿ ಸ್ಥಾನದ ಮೇಲೆ ಕೇಜ್ರಿವಾಲ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಆಪ್ ಪಕ್ಷದ ಪರಮೋಚ್ಛ ನಾಯಕ ಕೇಜ್ರಿವಾಲ್. ಅವರ ಪಕ್ಷವೇ ಪಂಜಾಬ್ ನಲ್ಲಿ ಅಧಿಕಾರದಲ್ಲಿದೆ.

ಹೀಗಾಗಿ ಈಗ ತಮ್ಮ ಗುರು ಕೇಜ್ರಿವಾಲ್ ಗಾಗಿ ಪಂಜಾಬ್ ನ ಹಾಲಿ ಸಿಎಂ ಭಗವಂತ್ ಮಾನ್ ಸಿಂಗ್ ಅಧಿಕಾರ ಬಿಟ್ಟುಕೊಡಬಹುದು ಎಂಬ ಸುದ್ದಿ ಹಬ್ಬಿದೆ. ದೆಹಲಿ ಹೋದರೆ ಪಂಜಾಬ್ ನಲ್ಲಾದರೂ ಮತ್ತೆ ಮುಖ್ಯಮಂತ್ರಿಯಾಗುವ ಹವಣಿಕೆಯಲ್ಲಿ ಕೇಜ್ರಿವಾಲ್ ಇದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೆ ಪಂಜಾಬ್ ನ ಆಪ್ ನಾಯಕರ ಅಭಿಪ್ರಾಯ ಮುಖ್ಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments