Webdunia - Bharat's app for daily news and videos

Install App

Delhi Elections: ದೆಹಲಿ ಜನರಿಗೆ ಇನ್ನು ಇದೆಲ್ಲಾ ಫ್ರೀ, ಮೋದಿ ಗ್ಯಾರಂಟಿಯಲ್ಲಿ ಏನೆಲ್ಲಾ ಇತ್ತು

Krishnaveni K
ಭಾನುವಾರ, 9 ಫೆಬ್ರವರಿ 2025 (11:39 IST)
ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಹಳ ವರ್ಷಗಳ ನಂತರ ಅಧಿಕಾರಕ್ಕೇರಿದ ಬಿಜೆಪಿ ಹಲವು ಉಚಿತ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಇದೀಗ ದೆಹಲಿ ಜನರಿಗೆ ಏನೆಲ್ಲಾ ಫ್ರೀ ಆಗಿ ಸಿಗಲಿದೆ, ಮೋದಿ ಗ್ಯಾರಂಟಿಯಲ್ಲಿ ಏನೆಲ್ಲಾ ಇತ್ತು ಇಲ್ಲಿದೆ ವಿವರ.

70 ಸ್ಥಾನಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 48 ಸ್ಥಾನ ಗೆದ್ದುಕೊಂಡ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದೆ. ಅದರ ಜೊತೆಗೆ ಚುನಾವಣೆ ಪೂರ್ವ ಕೊಟ್ಟ ಗ್ಯಾರಂಟಿ ಯೋಜನೆಗಳನ್ನೂ ಈಡೇರಿಸಬೇಕಿದೆ.

ಬಿಜೆಪಿ ಗ್ಯಾರಂಟಿಯಲ್ಲಿ ಏನೆಲ್ಲಾ ಇತ್ತು?
  • ಬಡ ಮಹಿಳೆಯರಿಗೆ ಮಾಸಿಕವಾಗಿ 2,500 ರೂ.
  • ಬಡ ಮಹಿಳೆಯರಿಗೆ 500 ರೂ.ಗೆ ಅಡುಗೆ ಅನಿಲ ಸಿಗಲಿದೆ.
  • ಹೋಳಿ-ದೀಪಾವಳಿಯಂತಹ ಹಬ್ಬದ ಸಂದರ್ಭದಲ್ಲಿ ಉಚಿತ ಸಿಲಿಂಡರ್ ವಿತರಣೆ
  • ಗರ್ಭಿಣಿಯರಿಗೆ 21 ಸಾವಿರ ರೂ. ಆರ್ಥಿಕ ನೆರವು.
  • 10 ಲಕ್ಷ ರೂ.ಒಳಗಿನ ವೈದ್ಯಕೀಯ ವೆಚ್ಚ ಉಚಿತ
  • ಒಪಿಡಿ ಸೇವೆಗಳು, ಪ್ರಯೋಗಾಲಯ ಸೇವೆಗಳೂ ಉಚಿತ
  • ದೆಹಲಿಯ 1700 ಕ್ಕೂ ಹೆಚ್ಚು ಅನಧಿಕೃತ ವಸಾಹತುಗಳಲ್ಲಿ ವಾಸಿಸುವ ಜನರು ತಮ್ಮ ಮನೆಗಳ ಮಾಲಿಕತ್ವ ಹಕ್ಕು ಪಡೆದುಕೊಳ್ಳಲಿದ್ದಾರೆ.
  • ಗಿಗ್ ಕಾರ್ಮಿಕರು ಮತ್ತು ಜವಳಿ ಕಾರ್ಮಿಕರಿಗೆ ತಲಾ 10 ಲಕ್ಷ ರೂ.ಗಳ ಜೀವ ವಿಮೆ
  • ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ 15 ಸಾವಿರ ಆರ್ಥಿಕ ನೆರವು.
  • ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮಾಸಿಕ 1000 ರೂ.ಗಳ ಸಹಾಯಧನ ಸಿಗಲಿದೆ.
ಇವಿಷ್ಟು ಘೋಷಣೆಗಳನ್ನು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಇದೀಗ ಅಧಿಕಾರಕ್ಕೇರಿದ ಬೆನ್ನಲ್ಲೇ ಜನರು ಈ ಭರವಸೆಗಳನ್ನು ಈಡೇರಿಸುತ್ತಾ ಎಂದು ಕಾದು ನೋಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments