Webdunia - Bharat's app for daily news and videos

Install App

ಸಣಕಲಾಗಿದ್ದಕ್ಕೆ ಕೆಲಸ ಕಳೆದುಕೊಂಡು ನೊಂದ ಗಗನಸಖಿ ಆತ್ಮಹತ್ಯೆ

Webdunia
ಶುಕ್ರವಾರ, 25 ಜುಲೈ 2014 (16:17 IST)
ದೈಹಿಕವಾಗಿ ತುಂಬ ಸಣಕಲಾದ ಕಾರಣಕ್ಕೆ ಕೆಲಸದಿಂದ ವಜಾಗೊಳಿಸಲ್ಪಟ್ಟ ಗಗನಸಖಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಪೂರ್ವ ದೆಹಲಿಯಲ್ಲಿ ವರದಿಯಾಗಿದೆ.


 
ಅರುಣಾ ಸಿಂಗ್ ಎಂಬ ಹೆಸರಿನ 24 ವರ್ಷದ ಆಕೆ ಖಾಸಗಿ ವಿಮಾನಯಾನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು.  ದೈಹಿಕವಾಗಿ ಅತಿ ಸಣಕಲಾದ ಕಾರಣಕ್ಕೆ ಕೆಲಸದಿಂದ ವಜಾ ಮಾಡಿದ್ದರಿಂದ ನೊಂದಿದ್ದ ಆಕೆ ಕಳೆದ ನಾಲ್ಕು ತಿಂಗಳಿಂದ ಖಿನ್ನತೆಗೊಳಗಾಗಿದ್ದಳು ಎಂದು ವರದಿಯಾಗಿದೆ. 
 
ಅರುಣಾಳ ಶವ ಆಕೆಯ ಕೋಣೆಯಲ್ಲಿನ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂತು ಎಂದು ಪೋಲಿಸರು ತಿಳಿಸಿದ್ದಾರೆ. 
 
ಕೆಲಸದಿಂದ ವಜಾಗೊಂಡ ನಂತರ ಆಕೆ  ತೂಕವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಳು.ಅಲ್ಲದೇ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಇಂಗ್ಲೀಷ್ ಭಾಷಾ ತರಗತಿಗೆ ಹೋಗುತ್ತಿದ್ದಳು ಎಂದು ಆಕೆಯ ಕುಟುಂಬದ ಮೂಲಗಳು ತಿಳಿಸಿವೆ. 
 
ನೇಣು ಬಿಗಿದುಕೊಳ್ಳುವ ಮೊದಲು ತನ್ನ ಸಹೋದರಿಯ ಜತೆ ಮಾತನಾಡಿದ್ದ ಅರುಣಾ, ನಂತರ ತನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲು ಹಾಕಿಕೊಂಡಳು ಎಂದು ತಿಳಿದು ಬಂದಿದೆ
 
ಆತ್ಮಹತ್ಯೆಗೆ ಶರಣಾದ ಯುವತಿ ಮರಣೋತ್ತರ ಪರೀಕ್ಷೆ ಇಂದು ನಡೆಸಲಾಗುತ್ತಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments