Webdunia - Bharat's app for daily news and videos

Install App

ಸ್ವಾತಂತ್ರ್ಯ ಹೋರಾಟಗಾರರು, ಹುತಾತ್ಮರಿಗಾಗಿ ವೆಬ್‌ಸೈಟ್

Webdunia
ಶುಕ್ರವಾರ, 23 ಸೆಪ್ಟಂಬರ್ 2016 (15:40 IST)
ಸ್ವಾತಂತ್ರ್ಯ ಹೋರಾಟಗಾರರು, ಹುತಾತ್ಮರಿಗಾಗಿ ವೆಬ್‌ಸೈಟ್ ಪ್ರಾರಂಭಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ಅವರು ಮಾಡಿದ ತ್ಯಾಗ- ಬಲಿದಾನದ ಬಗ್ಗೆ ಯುವಕರಲ್ಲಿ ಅರಿವು ಮತ್ತು ದೇಶಭಕ್ತಿಯ ಭಾವನೆ ಮೂಡಿಸಲು ಕೇಜ್ರಿವಾಲ್ ಸರ್ಕಾರ ಈ ನಡೆಯನ್ನಿಡುತ್ತಿದೆ.
ಭಗತ್ ಸಿಂಗ್ ಅವರ 110ನೇ ಜನ್ಮದಿನವಾದ ಸೆಪ್ಟೆಂಬರ್ 27ರಂದು ಈ ವೆಬ್‌ಸೈಟ್‌ನ್ನು ಆರಂಭಿಸಲಾಗುತ್ತಿದೆ. ಅಂದು ತಲಕಟೋರಾ ದೇಶಭಕ್ತಿಯ ಕಥಾಹಂದರವುಳ್ಳ ' ಶಹೀದ್ ಉತ್ಸವ ' ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಲಾಗುವುದು ಎಂದು ಕಾರ್ಮಿಕ ಮತ್ತು ಸಾಮಾನ್ಯ ಆಡಳಿತ ಇಲಾಖೆ ಸಚಿವ ಗೋಪಾಲ್ ರಾಯ್ ಹೇಳಿದ್ದಾರೆ. 
 
ಸ್ವಾತಂತ್ರ್ಯ ಹೋರಾಟಗಾರರು ಮತ್ತು ಹುತಾತ್ಮರಿಗೆ ಗೌರವ ನೀಡುವ ಉದ್ದೇಶದಿಂದ ನಾವು ವೆಬ್‌ಸೈಟ್‌ನ್ನು ಪ್ರಾರಂಭಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಎಲ್ಲಾ 29 ರಾಜ್ಯ ಸರ್ಕಾರಗಳು ಮತ್ತು ಏಳು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ ಜತೆ ಮಾತನಾಡಲಾಗಿದ್ದು ಸ್ವಾತಂತ್ರ್ಯ ಯೋಧರು, ಹುತಾತ್ಮರ ನಿಕಟ ಸಂಬಂಧಿಗಳ ಹೆಸರನ್ನು ನಾಮ ನಿರ್ದೇಶನ ಮಾಡಲು ಕೋರಲಾಗಿದೆ. ಅವರನ್ನು 'ಶಹೀದ್ ಉತ್ಸವ'‌ನಲ್ಲಿ ಸನ್ಮಾನಿಸಲಾಗುವುದು ಎಂದಿದ್ದಾರೆ ರಾಯ್. 
 
"ಬಾಂಗ್ಲಾದೇಶ, ಮಯನ್ಮಾರ್, ಯುನೈಟೆಡ್ ಕಿಂಗ್ಡಮ್ , ಕೆನಡಾ, ಅಮೇರಿಕಾದ ಮೊದಲಾದ ವಿದೇಶಗಳ ಸರ್ಕಾರಗಳನ್ನು ಅಲ್ಲಿಯ ರಾಯಭಾರಿಗಳ ಮೂಲಕ ಸಂಪರ್ಕಿಸಿ ಅಲ್ಲಿ ವಾಸವಾಗಿರುವ ಸ್ವಾತಂತ್ರ್ಯ ಯೋಧರು ಮತ್ತು ಹುತಾತ್ಮರುಗಳ ಅಥವಾ ಅವರ ಕುಟುಂಬ ಸದಸ್ಯರ ಬಗ್ಗೆ ಮಾಹಿತಿ ಪಡೆಯಲಾಗುವುದು ," ಎಂದಿದ್ದಾರೆ ರೈ.
 
ಜತೆಗೆ ಸ್ವಾತಂತ್ರ್ಯ ಯೋಧರು ಮತ್ತು ಹುತಾತ್ಮರುಗಳ ಭಾವಚಿತ್ರ ಮತ್ತು ವಿವರಗಳನ್ನು ನಮಗೆ ತಲುಪಿಸಲು ಸಾರ್ವಜನಿಕರಿಗೂ ವೇದಿಕೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments