Webdunia - Bharat's app for daily news and videos

Install App

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಹಣಕ್ಕೆ ಬೇಡಿಕೆಯಿಡುವ ಮಹಿಳೆಯರಿಗೆ ತಕ್ಕ ಉತ್ತರ ಕೊಟ್ಟ ದೆಹಲಿ ಕೋರ್ಟ್

Krishnaveni K
ಗುರುವಾರ, 20 ಮಾರ್ಚ್ 2025 (16:30 IST)
ನವದೆಹಲಿ: ಇತ್ತೀಚೆಗಿನ ದಿನಗಳಲ್ಲಿ ಮಹಿಳೆಯರ ಪರ ಕಾನೂನುಗಳು ದುರ್ಬಳಕೆಯಾಗುತ್ತಿದೆ ಎಂಬ ಆಕ್ರೋಶದ ಮಧ್ಯೆ ದೆಹಲಿ ಹೈಕೋರ್ಟ್ ದುಡ್ಡಿದ್ದರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಗಂಡನ ಬಳಿ ಹಣಕ್ಕಾಗಿ ಬೇಡಿಕೆಯಿಡುವ ಮಹಿಳೆಯರಿಗೆ ತಕ್ಕ ಉತ್ತರ ನೀಡಿದೆ.

ವಿಚ್ಛೇದನ ಪ್ರಕರಣಗಳಲ್ಲಿ ಪತ್ನಿಗೆ ಪತಿ ಜೀವನಾಂಶ ನೀಡಬೇಕಾಗುತ್ತದೆ. ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರು ಜೀವನದಲ್ಲಿ ಸಂಕಷ್ಟಕ್ಕೀಡಾಗಬಾರದು ಎಂಬ ಉದ್ದೇಶಕ್ಕೆ ಇಂತಹದ್ದೊಂದು ಕಾನೂನು ಇದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಇದನ್ನು ದುರ್ಬಳಕೆ ಮಾಡಲಾಗುತ್ತದೆ ಎಂಬ ಆರೋಪಗಳಿವೆ.

ಹೀಗಾಗಿ ದೆಹಲಿ ಹೈಕೋರ್ಟ್ ನೀಡಿದ ಈ ತೀರ್ಪು ಗಮನಾರ್ಹವಾಗಿದೆ. ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಮಧ್ಯಂತರವಾಗಿ ಗಂಡನಿಂದ ಜೀವನಾಂಶಕ್ಕೆ ಬೇಡಿಕೆ ಇಡಬಾರದು. ಕೋರ್ಟ್ ಇಂತಹ ವರ್ತನೆಯನ್ನು ಬೆಂಬಲಿಸಲ್ಲ ಎಂದು ಖಡಕ್ ಆಗಿ ಹೇಳಿದೆ.

ಮಹಿಳೆಯೊಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಗಂಡನಿಂದ ಜೀವನಾಂಶಕ್ಕೆ ಬೇಡಿಕೆಯಿಟ್ಟಿದ್ದರು. ಆದರೆ ಇದನ್ನು ಕೆಳಹಂತದ ಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಆಕೆ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಕೂಡಾ ಕೆಳಹಂತದ ಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಜೆ ಮುಗಿದ ತಕ್ಷಣ ಶಾಲೆ ಆರಂಭ: ಮಧು ಬಂಗಾರಪ್ಪ ಹೇಳಿಕೆ ಫುಲ್ ಟ್ರೋಲ್

ಕರ್ನಾಟಕ ಜಾತಿ ಗಣತಿ ಭವಿಷ್ಯ ಇಂದು ಹೈಕೋರ್ಟ್ ನಲ್ಲಿ ನಿರ್ಧಾರ

ಕರ್ನಾಟಕ ಜಾತಿ ಗಣತಿಯಲ್ಲಿ ಎಲ್ಲವೂ ಅಯೋಮಯ: ಮೊದಲ ದಿನವೇ ಅಧಿಕಾರಿಗಳಿಗೆ ತಲೆನೋವು

ಸೈಬರ್ ವಂಚಕರಿಂದ ಸುಧಾಮೂರ್ತಿ ಬಚಾವ್ ಆಗಿದ್ದು ಹೇಗೆ, ಇದು ನಿಮಗೂ ಪಾಠವಾಗುತ್ತೆ

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆಯ ಸೂಚನೆ

ಮುಂದಿನ ಸುದ್ದಿ
Show comments