Webdunia - Bharat's app for daily news and videos

Install App

ತಾಯಿಯ ಉಪಹಾರಕ್ಕಾಗಿ ರೈಲನ್ನೇ ನಿಲ್ಲಿಸಿದ ಪುತ್ರ

Webdunia
ಶುಕ್ರವಾರ, 5 ಜುಲೈ 2019 (16:25 IST)
ನವದೆಹಲಿ-ಭೋಪಾಲ್ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಮಥುರಾ ಜಂಕ್ಷನ್‌ನಲ್ಲಿ ತುರ್ತು ಸರಪಳಿಯನ್ನು ಎಳೆದಿದ್ದಾರೆ.
ಮನೀಶ್ ಅರೋರಾ ಎಂದು ಗುರುತಿಸಲ್ಪಟ್ಟ ಈ ವ್ಯಕ್ತಿ ದೆಹಲಿ ನಿವಾಸಿ. ರೈಲ್ವೆ ಕಾಯ್ದೆಯ ಸೆಕ್ಷನ್ 141 ರ ಅಡಿಯಲ್ಲಿ ಆತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
 
ಅರೋರಾ, ಜೂನ್ 30 ರಂದು ತನ್ನ ತಾಯಿ ಮತ್ತು ಇನ್ನೊಬ್ಬ ಸಂಬಂಧಿಯೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ತನ್ನ ತಾಯಿ ರೈಲ್ವೆ ನಿಲ್ದಾಣ ಬರುವವರೆಗೆ ಉಪಹಾರವನ್ನು ಮುಗಿಸುವುದು ಸಾಧ್ಯವಿಲ್ಲ. ಮುಂದಿನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗುವುದಿಲ್ಲ ಎಂದು ತಿಳಿದು ರೈಲು ನಿಲ್ಲುವ ಸರಪಳಿಯನ್ನು ಎಳೆದಿದ್ದಾನೆ. ಮಾಧ್ಯಮಗಳ ವರದಿಯ ಪ್ರಕಾರ, ನಂತರ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.
 
ಘಟನೆಯ ಬಗ್ಗೆ ಮಾತನಾಡಿದ ಮಥುರಾದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಯ ಸ್ಟೇಷನ್ ಹೌಸ್ ಅಧಿಕಾರಿ ಸಿಬಿ ಪ್ರಸಾದ್, “ಪ್ರಯಾಣಿಕರು ಸಿ -8 ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಿಗೆ ದೆಹಲಿಯಲ್ಲಿಯೇ ಉಪಹಾರ ನೀಡಲಾಗಿತ್ತು. ಆದರೆ, ಪ್ರಯಾಣಿಕರ ಅರೋರಾ ಅವರ ತಾಯಿಗೆ ಮಥುರಾ ರೈಲು ನಿಲ್ದಾಣ ಬರುವ ಮುನ್ನ ಊಟ ಮುಗಿಸಲು ಸಾಧ್ಯವಾಗಿರಲಿಲ್ಲ. ರೈಲು ಮಥುರಾ ರೈಲು ನಿಲ್ದಾಣಕ್ಕೆ ಕೆಲವೇ ನಿಮಿಷಗಳಲ್ಲಿ ತಲುಪಲಿರುವುದರಿಂದ ರೈಲು ಸರಪಳಿ ಎಳೆದು ರೈಲು ನಿಲ್ಲಿಸಿದ್ದಾನೆ ಎಂದು ತಿಳಿಸಿದ್ದಾರೆ.
 
ರೈಲ್ವೆಯ ನಿಯಮಾವಳಿಯಂತೆ ಅನಧಿಕೃತ ಹಸ್ತಕ್ಷೇಪಕ್ಕಾಗಿ ಅರೋರಾ ವಿರುದ್ಧ ಪ್ರಕರಣ ದಾಖಲಾಗಿದ್ದು ರೈಲ್ವೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ  ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments