Select Your Language

Notifications

webdunia
webdunia
webdunia
Sunday, 13 April 2025
webdunia

ರೈತ ಪ್ರತಿಭಟನೆಯಲ್ಲಿ ಪೊಲೀಸರ ವಿರುದ್ಧ ಖಡ್ಗದಿಂದ ದಾಳಿ ನಡೆಸಿದ ವ್ಯಕ್ತಿ ಅರೆಸ್ಟ್

ರೈತ ಪ್ರತಿಭಟನೆ
ನವದೆಹಲಿ , ಬುಧವಾರ, 17 ಫೆಬ್ರವರಿ 2021 (11:26 IST)
ನವದೆಹಲಿ: ಗಣರಾಜ್ಯೋತ್ಸವ ದಿನ ರೈತ ಪ್ರತಿಭಟನೆ ವೇಳೆ ದೆಹಲಿಯ ಕೆಂಪುಕೋಟೆ ಬಳಿ ಪೊಲೀಸರ ಮೇಲೆ ಖಡ್ಗ ಬೀಸಿ ದಾಂಧಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

 

ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆ ಖಡ್ಗ ಮಸೆದು ಬೆದರಿಸುತ್ತಿದ್ದ ವ್ಯಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈತ 30 ವರ್ಷದ ಮಣೀಂದರ್ ಸಿಂಗ್ ಎಂದು ಗುರುತಿಸಲಾಗಿದ್ದು, ಎಸಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಈತನನ್ನು ಬಂಧಿಸಿರುವ ಪೊಲೀಸರು ಈತನ ಬಳಿಯಿದ್ದ ಇನ್ನಷ್ಟು ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮಮಂದಿರ ದೇಣಿಗೆ ವಿವಾದ: ದಿಡೀರ್ ಪತ್ರಿಕಾಗೋಷ್ಠಿ ಕರೆದ ಎಚ್ ಡಿಕೆ