Webdunia - Bharat's app for daily news and videos

Install App

ಪಾಕ್ ರಾಯಭಾರಿ ಅಧಿಕಾರಿಯಿಂದ ಗೂಢಾಚಾರಿಕೆ

Webdunia
ಗುರುವಾರ, 27 ಅಕ್ಟೋಬರ್ 2016 (11:19 IST)
ದೇಶದ ಭದ್ರತೆಗೆ ಸಂಬಂಧಪಟ್ಟ ದಾಖಲೆ ಆರೋಪ ಹೊಂದಿದ ಆರೋಪದ ಮೇಲೆ ಪಾಕ್ ಹೈ ಕಮಿಷನ್‌ನ ಅಧಿಕಾರಿ ಮತ್ತು ಇತರ ನಾಲ್ವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಬಿಡುಗಡೆ ಮಾಡಲಾಗಿದೆ.

ಅಬ್ದುಲ್ ಬಸಿತ್ ಕಚೇರಿ ಸಿಬ್ಬಂದಿ ವರ್ಗದಲ್ಲಿರುವ ಮೊಹಮ್ಮದ್ ಅಕ್ತರ್‌ (35) ಮತ್ತು ಇತರರು ಪಾಕ್ ಬೇಹುಗಾರಿಕಾ ಸಂಸ್ಥೆ ಐಎಸ್ಐ ಪರ ಕೆಲಸ ಮಾಡುತ್ತಿದ್ದಾರೆ ಎಂಬ ಆಘಾತಕಾರಿ ಸತ್ಯ ಹೊರಬಿದ್ದಿದೆ. 

ರಾಯಭಾರಿಗಳನ್ನು ಒಂದೇ ಬಾರಿ ಬಂಧಿಸಲು ಸಾಧ್ಯವಾಗಿಲ್ಲ. ಅವರಿಗೆ ಬಂಧನ ಮತ್ತು ಕ್ರಿಮಿನಲ್ ಆರೋಪ ಹೇರಿಕೆಗಳ ಮೇಲಿಂದ ವಿನಾಯತಿ ಇರುತ್ತದೆ. ಹೀಗಾಗಿ ಅವರ ಬಳಿ ಇದ್ದ ಅತ್ಯುನ್ನತ ರಹಸ್ಯದ ರಕ್ಷಣಾ ದಾಖಲೆಗಳು, ನಕ್ಷೆಗಳು ಮತ್ತು ಬಲ ನಿಯೋಜನೆ ವಿವರಗಳನ್ನೊಳಗೊಂಡ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
 
ರಾಜತಾಂತ್ರಿಕ ಅಧಿಕಾರಿಗಳು ಕೇವಲ ರಾಜತಾಂತ್ರಿಕತೆಯನ್ನು ಮಾಡಬೇಕು. ಹೊರತು ಯಾವುದೇ ಗೂಢಾಚಾರಿಕೆಯನ್ನು ನಡೆಸಬಾರದು. ಅಕ್ತರ್ ಮತ್ತು ಇನ್ನುಳಿದ ಮೂವರು ಗೂಢಾಚಾರಿಕೆ ಮಾಡುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ದೆಹಲಿ ಕ್ರೈಂ ಬ್ರಾಂಚ್ ಪೊಲೀಸರಿಗೆ ಸೂಚನೆಯನ್ನು ನೀಡಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಅಕ್ತರ್ ಮತ್ತು ಇತರ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. 
 
ಕ್ರೈಂ ವಿಭಾಗದ ಪೊಲೀಸರು ಈ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಉಪರಾಜ್ಯಪಾಲ ನಜೀಬ್ ಜಂಗ್ ಅವರಿಗೆ ಮಾಹಿತಿ  ನೀಡುತ್ತಿದ್ದಾರೆ.  
 
ಈ ಕುರಿತು ಕಚೇರಿಗೆ ಬಂದು ಸ್ಪಷ್ಟನೆ ನೀಡುವಂತೆ ವಿದೇಶಾಂಗ ಇಲಾಖೆ ಹೈ ಕಮಿಷನರ್ ಅಬ್ದುಲ್ ಬಸಿತ್‌ಗೆ ಸಮನ್ಸ್ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಮುಂದಿನ ಸುದ್ದಿ
Show comments