Webdunia - Bharat's app for daily news and videos

Install App

ಫೋನ್ ಟ್ಯಾಪಿಂಗ್ ಬಗ್ಗೆ ಪ್ರಶ್ನಿಸಿದ ದೆಹಲಿ ಪೊಲೀಸ್; ಐಬಿಯನ್ನು ಕೇಳಿ ಎಂದ ಕೇಜ್ರಿವಾಲ್

Webdunia
ಶನಿವಾರ, 5 ನವೆಂಬರ್ 2016 (16:03 IST)
ನ್ಯಾಯಾಧೀಶರ ಪೋನ್ ಟ್ಯಾಪಿಂಗ್ ಕುರಿತಂತೆ ದೆಹಲಿ ಪೊಲೀಸರು ಕೇಳಿದ ಪ್ರಶ್ನೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಐಬಿಯವರನ್ನು ಕೇಳಿ ಎಂದು ಉತ್ತರಿಸಿದ್ದಾರೆ. 

ಕಳೆದ ನಾಲ್ಕು ದಿನಗಳ ಹಿಂದೆ ನಡೆದ ದೆಹಲಿ ಹೈಕೋರ್ಟ್‌ನ 50ನೇ ವರ್ಷಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನ್ನಾಡುತ್ತಿದ್ದ ಕೇಜ್ರಿವಾಲ್, ಸುಪ್ರೀಂಕೋರ್ಟ್, ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರ ಫೋನ್ ಟ್ಯಾಪ್ ಮಾಡಲಾಗುತ್ತಿದೆ. ಸ್ವತಃ ಕೆಲ ನ್ಯಾಯಾಧೀಶರೇ ನನಗಿದನ್ನು ಹೇಳಿದ್ದಾರೆ ಎಂದು ಬಾಂಬ್ ಸಿಡಿಸಿದ್ದರು. 
 
ಇದು ಸತ್ಯವೋ ಸುಳ್ಳೋ ಎಂಬುದು ನನಗೆ ಗೊತ್ತಿಲ್ಲ. ಸತ್ಯವೆಂದಾಗರೆ ಇದು ಅಪಾಯಕಾರಿ ಎಂದು ಅವರು ಹೇಳಿದ್ದರು. 
 
ಈ ಕುರಿತಂತೆ ದೆಹಲಿ ಪೊಲೀಸ್ ಕಮಿಷನರ್ ಅಲೋಕ್ ವರ್ಮಾ, ಫೋನ್ ಟ್ಯಾಪ್‌ಗೊಳಗಾದ ನ್ಯಾಯಾಧೀಶರ ವಿವರಗಳನ್ನು ಕೊಂಡಿ ಎಂದು ಕೇಜ್ರಿವಾಲ್‌ಗೆ ಪತ್ರ ಬರೆದಿದ್ದರು. 
 
ನ್ಯಾಯಾಧೀಶರ ಫೋನ್‌ಗಳು ಟ್ಯಾಪ್ ಆಗಿವೆ ಎಂದು ನೀವು ಹೇಳಿದ್ದೀರಿ. ಕೆಲವು ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಪ್ರಕಾರ ಕೆಲವು ನ್ಯಾಯಾಧೀಶರ ಬಾಯಿಂದಲೇ ನೀವಿದನ್ನು ಕೇಳಿದ್ದೀರಿ. ನಿಮಗೆ ಗೊತ್ತಿರುವಂತೆ ಇದು ಅತ್ಯಂತ ಗಂಭೀರವಾದ ವಿಷಯ. ಹೀಗಾಗಿ ಈ ಕುರಿತು ವಿವರವನ್ನು ನೀಡುವಂತೆ ವರ್ಮಾ ಪತ್ರದಲ್ಲಿ ಕೇಳಿಕೊಂಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments