ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದಾಖಲಿಸಲಾಗಿದ್ದ ಪ್ರಕರಣ ಕುರಿತಂತೆ ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಸ್ಗೆ ದೆಹಲಿ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ.
ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆಯೊಬ್ಬಳು ಕುಮಾರ್ ವಿಶ್ವಾಸ್ ಪಂಚಾತಾರಾ ಹೋಟೆಲ್ಗಳಲ್ಲಿ ಮೂರು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಳು.
ಇದೇ ಮಹಿಳೆ ಹಿಂದೆ ಕೂಡಾ ವಿಶ್ವಾಸ ಮತ್ತು ಅವರ ಬೆಂಬಲಿಗರು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ತನ್ನ ವಿರುದ್ಧ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಳು.
ನಂತರ ಆಕೆ, ಆಗಸ್ಟ್ 2015ರಲ್ಲಿ ದೆಹಲಿ ಮಹಿಳಾ ಆಯೋಗ ಮತ್ತು ಹೈಕೋರ್ಟ್ನಲ್ಲಿ ಕುಮಾರ್ ವಿಶ್ವಾಸ್ ವಿರುದ್ಧ ದೂರು ದಾಖಲಿಸಿದ್ದಳು.