Webdunia - Bharat's app for daily news and videos

Install App

ದಿನಕರನ್`ಗೆ ಮಧ್ಯರಾತ್ರಿ ದೆಹಲಿ ಪೊಲೀಸರ ಸಮನ್ಸ್

Webdunia
ಗುರುವಾರ, 20 ಏಪ್ರಿಲ್ 2017 (08:13 IST)
ಶಶಿಕಲಾ ಸೋದರಳಿಯ ಟಿಟಿವಿ ದಿನಕರನ್ ವಿರುದ್ಧ ದೆಹಲಿ ಪೊಲೀಸರು ಮತ್ತೊಂದು ಸಮನ್ಸ್ ಜಾರಿಮಾಡಿದ್ದಾರೆ. ಪಕ್ಷದ ಚಿಹ್ನೆಗಾಗಿ ಲಂಚ ನೀಡಿದ ಆರೋಪ ಪ್ರಕರಣದಲ್ಲಿ ಶನಿವಾರ ದೆಹಲಿಯ ಅಂತರ್ ರಾಜ್ಯ ಕ್ರೈಂ ಬ್ರಾಂಚ್ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್`ನಲ್ಲಿ ಸುಚಿಸಲಾಗಿದೆ.
 

ಪನ್ನೀರ್ ಸೆಲ್ವಂ ಮತ್ತು ಪಳನಿ ಸ್ವಾಮಿ ಬಣಗಳ ವೀಲಿನಕ್ಕಾಗಿ ಪಕ್ಷದ ಹಿತದೃಷ್ಟಿಯಿಂದ ದಿನಕರನ್ ಮತ್ತು ಶಶಿಕಲಾ ಪಕ್ಷದ ಕಾರ್ಯಚಟುವಟಿಕೆಯಿಂದ ಹೊರಗುಳಿಯುವುದಾಗಿ ಘೊಷಿಸಿದ ಕೆಲ ಗಂಟೆಗಳಲ್ಲೇ ಮಧ್ಯರಾತ್ರಿ ದಿನಕರನ್`ಗೆ ಸಮನ್ಸ್ ಜಾರಿಯಾಗಿದೆ.

ಪಕ್ಷದ ಚಟುವಟಿಕೆಯಿಂದ ಹೊರಗುಳಿಯುವ ಘೋಷಣೆಗೂ ಮುನ್ನ ಪಕ್ಷದ ಶಾಸಕರು ಮತ್ತು ಜಿಲ್ಲಾ ಕಾರ್ಯದರ್ಶಿಗಳ ಸಭೆ ಕರೆದು ಬಲಪ್ರದರ್ಶನಕ್ಕೆ ದಿನಕರನ್ ಮುಂದಾಗಿದ್ದರು. ಆದರೆ, ಆಪ್ರಯತ್ನ ಫಲ ನೀಡಲಿಲ್ಲ. ಹೀಗಾಗಿ, ದಿನಕರನ್ ಉಲ್ಟಾ ಹೊಡೆದಿದ್ದಾರೆ.

ಆರ್.ಕೆ. ನಗರ ಉಪಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಿಕೆ ಆರೋಪ,ಐಟಿ ದಾಳಿ ವೇಳೆ ಸಿಕ್ಕ ದಾಖಲೆಗಳಿಂದಾಗಿ ಪಕ್ಷದಲ್ಲಿ ದಿನಕರನ್ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು. ಇತ್ತೀಚೆಗೆ ಪಕ್ಷದ ಚಿಹ್ನೆಗಾಗಿ ಲಂಚ ನೀಡಿಕೆ ಪ್ರಕರಣ ಬಯಲಾದ ಬಳಿಕವಂತೂ ಆಂತರಿಕ ಬೇಗುದಿ ಕಟ್ಟೆ ಒಡೆದಿತ್ತು.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments