Webdunia - Bharat's app for daily news and videos

Install App

ದೆಹಲಿ ಶಿಕ್ಷಕನ ಹತ್ಯೆ: 1 ಕೋಟಿ ರೂ.ಪರಿಹಾರ ಧನ ಘೋಷಿಸಿದ ಮನೀಷ್ ಸಿಸೋಡಿಯಾ

Webdunia
ಮಂಗಳವಾರ, 27 ಸೆಪ್ಟಂಬರ್ 2016 (18:52 IST)
ಇಬ್ಬರು ವಿದ್ಯಾರ್ಥಿಗಳಿಂದ ಹತ್ಯೆಯಾದ ಶಾಲಾ ಶಿಕ್ಷಕನ ಕುಟುಂಬಕ್ಕೆ ಆಮ್ ಆದ್ಮಿ ಪಾರ್ಟಿ ನೇತೃತ್ವದ ದೆಹಲಿ ಸರಕಾರ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದೆ. 
 
ಶಾಲಾ ಶಿಕ್ಷಕನಾದ ಮುಕೇಶ್ ಕುಮಾರ್ ಎನ್ನುವವರನ್ನು ಇಬ್ಬರು ವಿದ್ಯಾರ್ಥಿಗಳು ಚಾಕುವನಿಂದ ಇರಿದು ಗಾಯಗೊಳಿಸಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಕ ಮುಕೇಶ್ ಮಾರನೇ ದಿನ ಸಾವನ್ನಪ್ಪಿದ್ದರು.
 
ಮುಕೇಶ್ ಕುಮಾರ್ ಕುಟುಂಬಕ್ಕೆ ಯಾರು ಆರ್ಥಿಕ ಸಹಾಯ ಮಾಡಲು ಮುಂದೆ ಬರಲಿಲ್ಲ. ಇದರಿಂದಾಗಿ ದೆಹಲಿ ಸರಕಾರ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.
 
ಹಿಂದಿನ ದಿನ ರಾತ್ರಿ ಸಿಸೋಡಿಯಾ ಆಸ್ಪತ್ರೆಗೆ ತೆರಳಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕನ ಯೋಗ ಕ್ಷೇಮ ವಿಚಾರಿಸಿದ್ದರು.
 
ನಮ್ಮ ಸರಕಾರ ಶಿಕ್ಷಕರ ಮಹತ್ವವನ್ನು ಅರಿತಿದೆ. ದೇಶದ ಗಡಿಯಲ್ಲಿ ಸೇವೆ ಸಲ್ಲಿಸುವ ಸೈನಿಕನಿಗೆ ನೀಡುವ ಗೌರವವನ್ನೇ ಶಿಕ್ಷಕರಿಗೆ ಸಹ ನೀಡುತ್ತೇವೆ ಎಂದು ತಿಳಿಸಿದ್ದಾರೆ. 
 
ನಾಂಗ್‌ಲೋಯಿ ಪ್ರದೇಶದಲ್ಲಿರುವ ಶಾಲೆಯಲ್ಲಿ ಶಿಕ್ಷಕರಾಗಿದ್ದ ಮುಕೇಶ್ ಕುಮಾರ್, ಕಡಿಮೆ ಹಾಜರಾತಿ ಹಿನ್ನೆಲೆಯಲ್ಲಿ ಸಹಪಾಠಿಗಳ ಮುಂದೆ ತರಾಟೆಗೆ ತೆಗೆದುಕೊಂಡಿದ್ದರಿಂದ ಆಕ್ರೋಶಗೊಂಡ 12 ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಗಂಬೀರವಾಗಿ ಗಾಯಗೊಳಿಸಿದ್ದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments