Webdunia - Bharat's app for daily news and videos

Install App

ವೃಂದಾವನದಲ್ಲಿ ಆಶ್ರಮದ ಮುಖ್ಯಸ್ಥನಿಂದ ಮಹಿಳೆ ಮೇಲೆ ಅತ್ಯಾಚಾರ

Webdunia
ಶನಿವಾರ, 5 ನವೆಂಬರ್ 2016 (16:56 IST)
ವಿವಾಹಿತ ಮಹಿಳೆಯ ಮೇಲೆ ಆಶ್ರಮದ ಮುಖ್ಯಸ್ಥನೇ ಅತ್ಯಾಚಾರವೆಸಗಿದ ಹೇಯ ಘಟನೆ ಮಥುರಾದ ವೃಂದಾವನದಲ್ಲಿ ನಡೆದಿದೆ. 
 
ಜುಲೈ 28 ರಂದು ಮಹಿಳೆ ತನ್ನ ಪತಿ ಜತೆ ಬೃಂದಾವನದಲ್ಲಿರುವ ವಿಪಿನ್ ಮಹಾರಾಜ್ ಗುರುಗಳ ರಾಸ್ ಬಿಹಾರಿ ಟ್ರಸ್ಟ್ ಚಾರಿಟೇಬಲ್ ಆಶ್ರಮಕ್ಕೆ ಭೇಟಿ ನೀಡಿದ್ದಳು. ಆ ಸಂದರ್ಭದಲ್ಲಿ ಆಕೆಯ ಮೇಲೆ ಅತ್ಯಾಚಾರವಾಗಿದ್ದು ವೃಂದಾವನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 
ನಿಜಕ್ಕೂ ನಡೆದಿದ್ದೇನು?
 
ಪೊಲೀಸರು ಹೇಳುವ ಪ್ರಕಾರ, ಜುಲೈ 28 ರಂದು ಮಹಿಳೆ ವಿಪಿನ್ ಮಹಾರಾಜ್ ಅವರನ್ನು ಭೇಟಿಯಾಗಲು ಬಂದಿದ್ದಳು. ಆ ಸಮಯದಲ್ಲಿ ಕೆಲವೊಂದು ಸಾಮಗ್ರಿ ತರುವ ನೆಪದಲ್ಲಿ ಮಹಿಳೆಯ ಗಂಡನನ್ನು ಹತ್ತಿರದ ಮಾರುಕಟ್ಟೆಗೆ ಕಳುಹಿಸಿದ ಆಶ್ರಮದ ಮುಖ್ಯಸ್ಥ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.
 
ತಾನೆಸಗಿದ ಕೃತ್ಯವನ್ನು ಯಾರ ಬಳಿಯಾದರೂ ಬಾಯ್ಬಿಟ್ಟರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಆತ ಬೆದರಿಕೆ ಸಹ ಒಡ್ಡಿದ್ದ. ಹೀಗಾಗಿ ದೆಹಲಿ ತಲುಪಿದ ಬಳಿಕ ಪತಿಯ ಬಳಿ ಆಕೆ ನಡೆದ ಸಂಗತಿಯನ್ನು ಹೇಳಿಕೊಂಡಿದ್ದಾಳೆ. 
 
ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರು ಮಹಿಳೆಯ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments