ಸ್ಮೃತಿ ಇರಾನಿಯನ್ನು ವಜಾಗೊಳಿಸುವಂತೆ ಒತ್ತಾಯ?

Webdunia
ಭಾನುವಾರ, 24 ಜುಲೈ 2022 (07:29 IST)
ನವದೆಹಲಿ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿ,

ಸ್ಮೃತಿ ಇರಾನಿ ಅವರನ್ನು ತಮ್ಮ ಸ್ಥಾನದಿಂದ ವಜಾ ಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಕಾಂಗ್ರೆಸ್ ಒತ್ತಾಯಿಸಿದೆ.

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಇರಾನಿ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ. ಅವರ ಮಗಳು ಗೋವಾದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ನಕಲಿ ಪರವಾನಗಿ ಮೇಲೆ ಬಾರ್ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸ್ಮೃತಿ ಇರಾನಿ ಅವರ ಮಗಳ ಪರವಾನಗಿಯು ಮೇ 2021 ರಲ್ಲಿ ನಿಧನರಾದ ವ್ಯಕ್ತಿಯ ಹೆಸರಿನಲ್ಲಿದೆ. ಆ ಪರವಾನಗಿಯನ್ನು 2022 ರ ಜೂನ್ನಲ್ಲಿ ಗೋವಾದಲ್ಲಿ ತೆಗೆದುಕೊಳ್ಳಲಾಗಿದೆ. ಆದರೆ ಪರವಾನಗಿಯಲ್ಲಿರುವ ಹೆಸರಿನ ವ್ಯಕ್ತಿ 13 ತಿಂಗಳ ಹಿಂದೆ ಸಾವನ್ನಪ್ಪಿದ್ದಾರೆ. ಇದು ಕಾನೂನುಬಾಹಿರ ಎಂದು ಆರೋಪಿಸಿದ್ದಾರೆ. 

ಸ್ಮೃತಿ ಇರಾನಿ ಅವರ ಪುತ್ರಿ ಕಿರಾತ್ ನಾಗ್ರಾ ಗೋವಾದಲ್ಲಿ ಅಕ್ರಮ ಬಾರ್ ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದರೂ ಅವರ ಪರ ವಕೀಲರು ಇದು ಸುಳ್ಳು ಆರೋಪ ಎಂದು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments