Webdunia - Bharat's app for daily news and videos

Install App

ನೋಟು ನಿಷೇಧ ಮಾನವ ನಿರ್ಮಿತ ದುರಂತ: ಮಮತಾ ಬ್ಯಾನರ್ಜಿ

Webdunia
ಶುಕ್ರವಾರ, 9 ಡಿಸೆಂಬರ್ 2016 (19:27 IST)
ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿಯನ್ನು ಮುಂದುವರೆಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ದೇಶಕ್ಕೆ ಆರ್ಥಿಕ ವಿಪತ್ತನ್ನು ಸೃಷ್ಟಿಸಿದ್ದಾರೆ, ಪ್ರಧಾನಿಯಾಗಿ ಮುಂದುವರೆಯಲು ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಗುಡುಗಿದ್ದಾರೆ.
 
ನೋಟು ನಿಷೇಧದಿಂದಾಗಿ ದೇಶದ ಬೆಳವಣಿಗೆ ಮತ್ತು ಉದ್ಯಮಕ್ಕೆ ಭಾರಿ ಪೆಟ್ಟು ನೀಡಿದಂತಾಗಿದೆ. ಪ್ರಧಾನಿ ಯಾರನ್ನು ಕೂಡ ನಂಬುವುದಿಲ್ಲ ಮತ್ತು ದೇಶಕ್ಕೆ ಯಾವುದು ಹಿತವೆಂಬುದನ್ನು ಅರಿತುಕೊಳ್ಳುವುದಿಲ್ಲ ಎಂದು ಅವರು ಆರೋಪಿಸಿದ್ದಾರೆ. 
 
ರಾಜ್ಯ ಸಚಿವಾಲಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನ್ನಾಡುತ್ತಿದ್ದ ಅವರು, "ಇದರಲ್ಲಿ ಒಂದು ತಂಡವಾಗಿ ಕೆಲಸ ನಿರ್ವಹಿಸಿರುವುದು ಕಂಡು ಬರುವುದಿಲ್ಲ. ಇದು ಏಕವ್ಯಕ್ತಿ ಸರ್ವಾಧಿಕಾರತ್ವ. ಸೃಷ್ಟಿಯಾಗಿರುವುದು ಮಾನವ ನಿರ್ಮಿತ ವಿಪತ್ತು. ಮತ್ತಿದು ಅಪಾಯಕಾರಿ ಪ್ರವೃತ್ತಿ ಎಂದು ಕಿಡಿಕಾರಿದರು. 
 
ತಪ್ಪು ಮಾಡಿದ ಬಳಿಕ ಅವರು ಎದೆ ಮತ್ತು ಭುಜವನ್ನು ತೋರಿಸುತ್ತಾರೆ. ಏನಿದು? ಇಂತವರು ಸಿನಿಮಾಗಳಲ್ಲಿ ಇರಬೇಕಷ್ಟೇ. ರಾವಣನಿಗೂ ದೊಡ್ಡದಾದ ಭುಜಗಳಿದ್ದವು ಎಂದು ಅವರು ಕುಹಕವಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments