Webdunia - Bharat's app for daily news and videos

Install App

ನೋಟು ನಿಷೇಧ ಮಾನವ ನಿರ್ಮಿತ ದುರಂತ: ಮಮತಾ ಬ್ಯಾನರ್ಜಿ

Webdunia
ಶುಕ್ರವಾರ, 9 ಡಿಸೆಂಬರ್ 2016 (19:27 IST)
ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿಯನ್ನು ಮುಂದುವರೆಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ದೇಶಕ್ಕೆ ಆರ್ಥಿಕ ವಿಪತ್ತನ್ನು ಸೃಷ್ಟಿಸಿದ್ದಾರೆ, ಪ್ರಧಾನಿಯಾಗಿ ಮುಂದುವರೆಯಲು ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಗುಡುಗಿದ್ದಾರೆ.
 
ನೋಟು ನಿಷೇಧದಿಂದಾಗಿ ದೇಶದ ಬೆಳವಣಿಗೆ ಮತ್ತು ಉದ್ಯಮಕ್ಕೆ ಭಾರಿ ಪೆಟ್ಟು ನೀಡಿದಂತಾಗಿದೆ. ಪ್ರಧಾನಿ ಯಾರನ್ನು ಕೂಡ ನಂಬುವುದಿಲ್ಲ ಮತ್ತು ದೇಶಕ್ಕೆ ಯಾವುದು ಹಿತವೆಂಬುದನ್ನು ಅರಿತುಕೊಳ್ಳುವುದಿಲ್ಲ ಎಂದು ಅವರು ಆರೋಪಿಸಿದ್ದಾರೆ. 
 
ರಾಜ್ಯ ಸಚಿವಾಲಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನ್ನಾಡುತ್ತಿದ್ದ ಅವರು, "ಇದರಲ್ಲಿ ಒಂದು ತಂಡವಾಗಿ ಕೆಲಸ ನಿರ್ವಹಿಸಿರುವುದು ಕಂಡು ಬರುವುದಿಲ್ಲ. ಇದು ಏಕವ್ಯಕ್ತಿ ಸರ್ವಾಧಿಕಾರತ್ವ. ಸೃಷ್ಟಿಯಾಗಿರುವುದು ಮಾನವ ನಿರ್ಮಿತ ವಿಪತ್ತು. ಮತ್ತಿದು ಅಪಾಯಕಾರಿ ಪ್ರವೃತ್ತಿ ಎಂದು ಕಿಡಿಕಾರಿದರು. 
 
ತಪ್ಪು ಮಾಡಿದ ಬಳಿಕ ಅವರು ಎದೆ ಮತ್ತು ಭುಜವನ್ನು ತೋರಿಸುತ್ತಾರೆ. ಏನಿದು? ಇಂತವರು ಸಿನಿಮಾಗಳಲ್ಲಿ ಇರಬೇಕಷ್ಟೇ. ರಾವಣನಿಗೂ ದೊಡ್ಡದಾದ ಭುಜಗಳಿದ್ದವು ಎಂದು ಅವರು ಕುಹಕವಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments