Webdunia - Bharat's app for daily news and videos

Install App

ಬ್ಯಾಂಕ್‌, ಎಟಿಎಂಗಳಲ್ಲಿ ಸರದಿಗೆ ನಿಂತ ಜನರನ್ನು ಲೇವಡಿ ಮಾಡಿದ ಬಿಜೆಪಿ ಮುಖಂಡ

Webdunia
ಗುರುವಾರ, 5 ಜನವರಿ 2017 (14:25 IST)
ಬ್ಯಾಂಕ್ ಮತ್ತು ಎಟಿಎಂಗಳಲ್ಲಿ ಸರದಿಗಾಗಿ ನಿಂತ ಜನರನ್ನು ಲೇವಡಿ ಮಾಡಿದ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ದೆಹಲಿಯ ಪ್ರವಾಸೋದ್ಯಮ ಮತ್ತು ಸಂಸ್ಕ್ರತಿ ಖಾತೆ ಸಚಿವರಾದ ಕಪಿಲ್ ಮಿಶ್ರಾ ಒತ್ತಾಯಿಸಿದ್ದಾರೆ.
 
ವಿಡಿಯೋವೊಂದರಲ್ಲಿ ಮನೋಜ್ ತಿವಾರಿ ಹಾಡು ಹಾಡುತ್ತಾ, ಬ್ಯಾಂಕ್ ಮತ್ತು ಎಟಿಎಂಗಳ ಮುಂದೆ ಸರದಿಗಾಗಿ ನಿಂತಿದ್ದ ಜನರನ್ನು ಲೇವಡಿ ಮಾಡಿದ್ದರು.
 
ನೋಟು ನಿಷೇಧದಿಂದಾಗಿ  ಬ್ಯಾಂಕ್ ಮತ್ತು ಎಟಿಎಂಗಳ ಮುಂದೆ ಸರದಿಗಾಗಿ ನಿಂತಿದ್ದ ಜನರನ್ನು ಲೇವಡಿ ಮಾಡಿ ದೇಶಭಕ್ತಿಯ ಹೆಸರಲ್ಲಿ ಜನರನ್ನು ಮೂರ್ಖರನ್ನಾಗಿ ಮಾಡುವುದು ಎಷ್ಟು ಸುಲಭ ಎಂದು ಬಿಜೆಪಿ ಮುಖಂಡ ಮನೋಜ್ ತಿವಾರಿ ನೀಡಿದ ಹೇಳಿಕೆಯ ವಿಡಿಯೋ ದೇಶಾದ್ಯಂತ ಜನತೆಯಲ್ಲಿ ಆಕ್ರೋಶ ಮೂಡಿಸಿದೆ.
 
ದೆಹಲಿ ವಿಧಾನಸಭೆಯ ವಿಪಕ್ಷ ನಾಯಕರಾದ ವಿಜೇಂದರ್ ಗುಪ್ತಾ ಸೇರಿದಂತೆ ಹಲವಾರು ನಾಯಕರು ತಿವಾರಿ ಅವರ ಲೇವಡಿಗೆ ಚಪ್ಪಾಳೆ ತಟ್ಟುತ್ತಾ ನಾಚಿಕೆಗೇಡಿಗಳಂತೆ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಆಮ್ ಆದ್ಮಿ ಪಕ್ಷದ ಮುಖಂಡ, ಪ್ರವಾಸೋದ್ಯಮ ಖಾತೆ ಸಚಿವ ಕಪಿಲ್ ಮಿಶ್ರಾ ಟ್ವಿಟ್ ಮಾಡಿ ಸಹೋದರ ಬಿಜೆಪಿ ಮುಖಂಡ ಮನೋಜ್ ತಿವಾರಿ ನಿಮ್ಮ ವರ್ತನೆ ದೇಶದ ಜನತೆಗೆ ಅಗೌರವ ತರುವಂತಹದು, ನೋವು ತರುವಂತಹದು ಮತ್ತು ಅಸ್ವೀಕಾರಾರ್ಹವಾಗಿದೆ ಎಂದು ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments