Webdunia - Bharat's app for daily news and videos

Install App

ನೋಟು ನಿಷೇಧ ಆಘಾತ: ಹೊಸ 500, 2000 ನೋಟುಗಳ ವರದಕ್ಷಿಣೆ ನೀಡದ್ದರಿಂದ ನವವಿವಾಹಿತೆ ಹತ್ಯೆ

Webdunia
ಗುರುವಾರ, 1 ಡಿಸೆಂಬರ್ 2016 (13:24 IST)
ನೋಟು ನಿಷೇಧದಿಂದಾಗಿ ದೇಶಾದ್ಯಂತ 90 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ವರದಿಗಳಿವೆ. ನೋಟು ಹಾವಳಿಯಿಂದಾದ ಹಾನಿ ಅಷ್ಟಿಷ್ಟಲ್ಲ. ಇದೀಗ ಮತ್ತೊದು ಜೀವ ನೋಟು ನಿಷೇಧಕ್ಕೆ ಬಲಿಯಾಗಿದೆ.
 
500 ಮತ್ತು 2000 ಹೊಸನೋಟುಗಳಿರುವ 1.70 ಲಕ್ಷ ರೂಪಾಯಿ ವರದಕ್ಷಿಣೆ ತರಲಿಲ್ಲ ಎನ್ನುವ ಕಾರಣಕ್ಕೆ ನವವಿವಾಹಿತೆಯೊಬ್ಬಳನ್ನು ಆಕೆ ಪತಿಯ ಕುಟುಂಬದವರು ಹತ್ಯೆ ಮಾಡಿದ ಹೇಯ ಘಟನೆ ವರದಿಯಾಗಿದೆ. 
 
ವಧುವಿನ ತಂದೆ ವಿವಾಹದ ಸಂದರ್ಭದಲ್ಲಿ 1.70 ಲಕ್ಷ ರೂಪಾಯಿ ವರದಕ್ಷಿಣೆ ನೀಡುವುದಾಗಿ ಅಳಿಯನ ಕುಟುಂಬದವರಿಗೆ ಮಾತುಕೊಟ್ಟಿದ್ದರು. ಆದರೆ,ಬ್ಯಾಂಕ್‌ಗಳಲ್ಲಿ ಹಣದ ಕೊರತೆ ಎದುರಾಗಿದ್ದರಿಂದ ಹಣ ದೊರೆತಿರಲಿಲ್ಲ. ಇದರಿಂದ ಆಕ್ರೋಶಗೊಂಡು ಪತಿಯ ಕುಟುಂಬದವರು ಆಕೆಯನ್ನು ಹತ್ಯೆ ಮಾಡಿದ್ದಾರೆ.
 
ವಧು ಪ್ರಭಾತಿಯ ವಿವಾಹ ಅದೇ ಗ್ರಾಮದ ಲಕ್ಷ್ಮಿ ನಾಯಕ್ ಎಂಬಾತನೊಂದಿಗೆ ನಿಶ್ಚಯವಾಗಿತ್ತು. ನವೆಂಬರ್ 9 ರಂದು ವಿವಾಹದ ದಿನಾಂಕ ನಿಗದಿಪಡಿಸಲಾಗಿತ್ತು. ವಧುವಿನ ತಂದೆ ವಿವಾಹದ ದಿನದಂದು ವರದಕ್ಷಿಣೆ ನೀಡಲು ನಿರ್ಧರಿಸಿದ್ದರು,
 
ಆದರೆ, ನವೆಂಬರ್ 8 ರಂದು ಪ್ರಧಾನಿ ಮೋದಿ ನೋಟು ನಿಷೇಧ ಘೋಷಿಸಿದ್ದರಿಂದ ಆಘಾತಗೊಂಡಿದ್ದರು. ಮಾರನೇ ದಿನ ಬ್ಯಾಂಕ್‌ಗೆ ಹೋಗಿ ಹಣ ಕೇಳಿದಾಗ, ಬ್ಯಾಂಕ್‌ನಲ್ಲಿ ಹಣವಿಲ್ಲವಾದ್ದರಿಂದ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
 
ವಧುವಿನ ತಂದೆ ಹಳೆಯ 500 ಮತ್ತು 1000 ರೂಪಾಯಿಗಳ 1.70 ಲಕ್ಷ ರೂಪಾಯಿ ನೀಡಲು ಹೋದಾಗ ವರನ ಕುಟುಂಬದವರು ಹಣ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಬ್ಯಾಂಕ್‌ಗಳಲ್ಲಿ ಹೊಸ ನೋಟುಗಳು ದೊರೆಯುತ್ತಿಲ್ಲ ಎಂದು ಪರಿಪರಿಯಾಗಿ ಕೇಳಿಕೊಂಡರು ವರನ ಮನ ಕರಗಲಿಲ್ಲ ಎನ್ನಲಾಗಿದೆ.
 
ಮಾರನೇ ದಿನ ವಧುವಿನ ಹತ್ಯೆಯಾದ ಸುದ್ದಿ ವರದಿಯಾಗಿದೆ. ಕೂಡಲೇ ಪೊಲೀಸ್ ಠಾಣೆಗೆ ತೆರಳಿದ ವಧುವಿನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments