Webdunia - Bharat's app for daily news and videos

Install App

ನೋಟು ನಿಷೇಧ ಮಾಡಿದ ಬಿಜೆಪಿಗೆ ಚುನಾವಣೆಯಲ್ಲಿ ತಕ್ಕ ಪಾಠ: ಸಿಎಂ ಅಖಿಲೇಶ್ ಯಾದವ್

Webdunia
ಭಾನುವಾರ, 25 ಡಿಸೆಂಬರ್ 2016 (15:00 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನೋಟು ನಿಷೇಧ ಪ್ರಮುಖ ಚುನಾವಣೆ ವಿಷಯವಾಗಿದ್ದು, ನೋಟು ನಿಷೇಧದಿಂದಾಗಿ ಸಂಕಷ್ಟ ಎದುರಿಸಿದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ.
 
ನೋಟು ನಿಷೇಧ ಜಾರಿಗೊಳಿಸಿದ್ದರಿಂದ ತೊಂದರೆಗೊಳಗಾದ ಬಡವರು, ಮಧ್ಯಮ ವರ್ಗದವರು ಸೂಕ್ತ ಸಮಯ ಬಂದಾಗ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು. 
 
ಬ್ಯಾಂಕ್‌ಗಳಲ್ಲಿ ಸರದಿಯಲ್ಲಿ ನಿಂತು ಸಾವನ್ನಪ್ಪಿದ 14 ಜನರ ಕುಟುಂಬಗಳಿಗೆ ಸಿಎಂ ಅಖಿಲೇಶ್ ಯಾದವ್ ತಲಾ 2 ಲಕ್ಷ ರೂಪಾಯಿಗಳ ನೆರವು ನೀಡಿದ್ದಾರೆ.
 
ನೋಟು ನಿಷೇಧದಿಂದಾಗಿ ದೇಶದ ಆರ್ಥಿಕತೆಗೆ ಭಾರಿ ಹೊಡೆತ ಬಿದ್ದಿದ್ದು, ಶೀಘ್ರದಲ್ಲಿಯೇ ಚೇತರಿಕೆ ಕಾಣುವ ಯಾವುದೇ ಲಕ್ಷಣಗಳಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
 
ಹಲವು ದಿನಗಳ ಕಾಲ ಬ್ಯಾಂಕ್ ಮುಂದೆ ಸರದಿಯಲ್ಲಿ ನಿಂತಿದ್ದರೂ ಅವರದ್ದೇ ಆದ ಹಣವನ್ನು ಬ್ಯಾಂಕ್‌ನಿಂದ ಪಡೆಯಲು ಸಾಧ್ಯವಾಗದಿರುವುದು ನಿಜವಾಗಿಯೂ ಶೋಚನೀಯ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅಸಮಾದಾನ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments