Webdunia - Bharat's app for daily news and videos

Install App

ಡೆಂಘೀ, ಚಿಕುನ್ ಗುನ್ಯಾಗೆ ಬೆಚ್ಚಿ ಬಿದ್ದ ರಾಜಧಾನಿ

Webdunia
ಮಂಗಳವಾರ, 20 ಜೂನ್ 2017 (15:09 IST)
ಮಳೆಗಾಲ ಆರಂಭವಾದರೂ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಾರಕ ಚಿಕುನ್ ಗುನ್ಯಾ, ಡೆಂಘಿ ಹಾವಳಿ ನಿಂತಿಲ್ಲ. ಸಾಂಕ್ರಾಮಿಕ ರೋಗಾಣುಗಳ ಚಟುವಟಿಕೆಯ ಸೀಸನ್ ಡಿಸೆಂಬರ್`ಗೆ ಅಂತ್ಯವಾದರೂ ಸೋಂಕು ಮಾತ್ರ ನಿಂತಿಲ್ಲ. ದೆಹಲಿಯಲ್ಲಿ 150ಕ್ಕೂ ಅಧಿಕ ಚಿಕುನ್ ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ.

ಚಿಕುನ್ ಗುನ್ಯಾ ರೋಗವನ್ನ ತಡಯುವ ನಿಟ್ಟಿನಲ್ಲಿ ಸಂಪೂರ್ಣ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದು, ಮನೆಗಳ ಮುಂದೆ ಸೊಳ್ಳೆ ಬೆಳವಣಿಗೆಗೆ ಕಾರಣವಾಗುವ ನೀರಿನ ಸಂಗ್ರಹಗಳ ಬಗ್ಗೆ ಸಂಪೂರ್ಣ ಮೇಲ್ವಿಚಾರಣೆ ನಡೆಸಲಾಗುತ್ತಿದೆ.

ಈ ಮಧ್ಯೆ, 87 ಡೆಂಗ್ಯೂ ಪ್ರಕರಣಗಳು ಸಹ ದಾಖಲಾಗಿದ್ದು, ರಾಜಧಾನಿ ಜನತೆ ಬೆಚ್ಚಿಬೀಳುವಂತೆ ಮಾಡಿದೆ. 146 ಚಿಕುನ್ ಗುನ್ಯಾ ಕೇಸ್`ಗಳಲ್ಲಿ ಮೇನಲ್ಲಿ 10, ಏಪ್ರಿಲ್`ನಲ್ಲಿ 19, ಮಾರ್ಚ್`ನಲ್ಲಿ 34, ಜನವರಿ ಮತ್ತು ಫೆಬ್ರವರಿಯಲ್ಲಿ 33 ಪ್ರಕರಣಗಳು ದಾಖಲಾಗಿವೆ.

ಜೂನ್ ತಿಂಗಳಲ್ಲೇ 10 ಡೆಂಗ್ಯೂ ಪ್ರಕರಣಗಳು, ಮೇನಲ್ಲಿ 8 ಕೇಸ್`ಗಳು ದಾಖಲಾಗಿವೆ. ಮೇನಲ್ಲಿ ಉನ್ನತಮಟ್ಟದ ಸಭೆ ಕರೆದಿದ್ದ ಸಿಎಂ ಕೇಜ್ರಿವಾಲ್ ಗಂಭೀರ ಚರ್ಚೆ ನಡೆಸಿದ್ದರು. . ಈ ಬಗ್ಗೆ ಟ್ವಿಟ್ ಮಾಡಿರುವ ಕೇಜ್ರಿವಾಲ್, ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಿಂದ ನಗರ ಜರ್ಜರಿತವಾಗಿದೆ. ಸೊಳ್ಳೆ ಮುಕ್ತ ನಗರವನ್ನಾಗಿ ಮಾಡಲು ಕ್ರಮ ಕೈಗೊಂಡಿದ್ದು, ಜನರ ಚಳುವಳಿಯಾಗಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments