Webdunia - Bharat's app for daily news and videos

Install App

ಹಾಜಿ ಅಲಿ ದರ್ಗಾದೊಳಗೆ ಪ್ರವೇಶಿಸಲು ತೃಪ್ತಿ ದೇಸಾಯಿ ಹರಸಾಹಸ

Webdunia
ಗುರುವಾರ, 28 ಏಪ್ರಿಲ್ 2016 (14:29 IST)
ಶನಿ ಶಿಂಗ್ಣಾಪುರ್ ಮತ್ತು ತ್ರಿಂಭಕೇಶ್ವರ್ ದೇವಾಲಯದೊಳಗೆ ಮಹಿಳೆಯರಿಗೆ ಪ್ರವೇಶಿಸುವ ಹಕ್ಕು ಪಡೆದುಕೊಂಡು ಗೆಲುವಿನ ಉತ್ಸಾಹದಲ್ಲಿರುವ ಭೂಮಾತಾ ಬ್ರಿಗೇಡ್‌ನ ತೃಪ್ತಿ ದೇಸಾಯಿ, ಇದೀಗ, ಮಹಿಳೆಯರಿಗೆ ನಿಷೇಧ ಹೇರಿರುವ ಹಾಜಿ ಅಲಿ ದರ್ಗಾದಲ್ಲಿ ಮಹಿಳೆಯರಿಗೆ ಪ್ರವೇಶ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.
 
ಸ್ಥಳೀಯ ಎಐಎಂಐಎಂ ಪಕ್ಷ ನಾಯಕನೊಬ್ಬ ಮಾತನಾಡಿ, ಯಾವುದೇ ಕಾರಣಕ್ಕೂ ತೃಪ್ತಿ ದೇಸಾಯಿಯನ್ನು ದರ್ಗಾದೊಳಗೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ. ಒಂದು ವೇಳೆ ಪ್ರವೇಶಿಸಿದಲ್ಲಿ ಅವರ ಮುಖಕ್ಕೆ ಕಪ್ಪು ಮಸಿ ಬಳೆಯಲಾಗುವುದು ಎಂದು ತಿಳಿಸಿದ್ದಾರೆ.
 
ಹಾಜಿ ಅಲಿ ದರ್ಗಾ ಪ್ರವೇಶ ಕುರಿತಂತೆ ಶಾಂತಿಯುತ ಮೆರವಣಿಗೆ ನಡೆಸಿ, ದರ್ಗಾದಲ್ಲಿ ಪ್ರಾರ್ಥಿಸಿದ ನಂತರ ಮುಂದಿನ ಹೋರಾಟದ ರೂಪರೇಷೆಗಳನ್ನು ರೂಪಿಸಲಾಗುವುದು ಎಂದು ದೇಸಾಯಿ ತಿಳಿಸಿದ್ದಾರೆ.
 
ಬಾಲಿವುಡ್ ನಟರಾದ ಶಾರುಕ್ ಖಾನ್, ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್ ನಮ್ಮ ಸಮಾನತೆಯ ಹೋರಾಟಕ್ಕೆ ಬೆಂಬಲ ನೀಡಿದಲ್ಲಿ ನಮಗೆ ನೆರವಾಗುತ್ತದೆ ಎಂದು ಮನವಿ ಮಾಡಿದ್ದಾರೆ. 
 
ಎಐಎಂಐಎಂ ಮುಖಂಡ ಹಾಜಿ ರಫತ್ ಹುಸೈನ್ ಮಾತನಾಡಿ, ಸಮಾಧಿಯಿರುವ ಸ್ಥಳದಲ್ಲಿ ಮಹಿಳೆಯರು ಪ್ರವೇಶಿಸುವುದು ಇಸ್ಲಾಂಗೆ ವಿರುದ್ಧವಾಗಿದೆ. ನಮ್ಮ ಪಕ್ಷದ ಬೆಂಬಲಿಗರು ಯಾವುದೇ ಕಾರಣಕ್ಕೂ ದೇಸಾಯಿಯವರನ್ನು ದರ್ಗಾದೊಳಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments