Webdunia - Bharat's app for daily news and videos

Install App

ಯುವಕನ ಕ್ರೌರ್ಯಕ್ಕೆ ಬೆಚ್ಚಿಬಿದ್ದ ಬಿದ್ದ ದೇವರನಾಡು: ಐದು ಮಂದಿಯನ್ನು ಕೊಂದು ಠಾಣೆಗೆ ಬಂದ ಹಂತಕ

Sampriya
ಬುಧವಾರ, 26 ಫೆಬ್ರವರಿ 2025 (20:52 IST)
Photo Courtesy X
ತಿರುವನಂತಪುರ:  ಇಲ್ಲಿನ ಹೊರವಲಯವಾದ ವೆಂಜರಮೂಡು ಎಂಬಲ್ಲಿ ಯುವಕನೊಬ್ಬನ ಅಟ್ಟಹಾಸಕ್ಕೆ ಐದು ಮಂದಿ ಬಲಿಯಾಗಿದ್ದಾರೆ. ಈ ಘಟನೆಯು ಕೇರಳ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

23 ವರ್ಷದ ಆಘಾನ್‌ ಎಂಬ ಯುವಕ  ಫೆಬ್ರುವರಿ 24ರಂದು ತನ್ನ ಕುಟುಂಬದ ಐವರನ್ನು ಸುತ್ತಿಗೆಯಿಂದ ಹಣೆ, ತಲೆಗೆ ಹೊಡೆದು ಅತ್ಯಂತ ಕ್ರೂರವಾಗಿ ಹತ್ಯೆಮಾಡಿದ್ದಾರೆ. ಅಲ್ಲದೆ, ತಾಯಿಯ ಮೇಲೂ ಗಂಭೀರ ಹಲ್ಲೆ ಮಾಡಿದ್ದಾನೆ. ಆತನ ತಾಯಿ ತಿರುವನಂತಪುರದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

ಫೆಬ್ರುವರಿ 24ರಂದು ಬೆಳಿಗ್ಗೆ 10.30 ರಿಂದ 12.30ರ ಸುಮಾರು ವೆಂಜರಮೂಡುವಿನ ಪಾಂಗೊಡೆ ಮನೆಯಲ್ಲಿ ಹಾಲ್‌ನಲ್ಲಿ ಕುಳಿತಿದ್ದ ಆಘಾನ್‌ ತನ್ನ ಅಜ್ಜಿ 74 ವರ್ಷದ ಸಲ್ಮಾ ಬೀಬಿ ಅವರನ್ನು ಸಾಯಿಸಿದ್ದಾನೆ. ನಂತರ ಎಸ್‌.ಎನ್‌ ಪುರ ಎಂಬಲ್ಲಿಗೆ ತೆರಳಿ ತನ್ನ ಚಿಕ್ಕಪ್ಪ 60 ವರ್ಷದ ಲತೀಫ್’ ಮತ್ತು ಚಿಕ್ಕಮ್ಮ 56 ವರ್ಷದ ಶಾಹೀದಾ ಅವರನ್ನು ಕೊಂದಿದ್ದಾನೆ.

ಇಷ್ಟಕ್ಕೆ ಶಾಂತವಾಗದ ಆರೋಪಿ ಶಾಲೆಗೆ ಹೋಗಿದ್ದ ತನ್ನ 14 ವರ್ಷದ ತಮ್ಮ ಆಫ್ಸಾನ್‌, ತಾಯಿ 50 ವರ್ಷದ ರೇಷ್ಮಾ ಹಾಗೂ ಗೆಳತಿ 22 ವರ್ಷದ ಫರ್ಸಾನಾ ಅವರ ಮೇಲೆ ಹಲ್ಲಿ ಮಾಡಿದ್ದಾನೆ. ಆದರೆ, ಆಫ್ಸಾನ್‌, ಫರ್ಸಾನಾ ಮೃತಪಟ್ಟರೆ, ತಾಯಿ ಬದುಕಿದ್ದಾರೆ.

ಆಫಾನ್ ಅದೇ ದಿನ ರಾತ್ರಿ 8 ಗಂಟೆ ಸುಮಾರು ವೆಂಜರಮೂಡು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಸದ್ಯ ಪೊಲೀಸ್ ವಶದಲ್ಲಿರುವ ಆಫಾನ್‌ನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ.  ಆಫಾನ್ ಕೊಲೆಗಳನ್ನು ಮಾಡುವ ಮುನ್ನ ಡ್ರಗ್ಸ್‌ ತೆಗೆದುಕೊಂಡಿದ್ದು ದೃಢಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments