Webdunia - Bharat's app for daily news and videos

Install App

ಮಹಾರಾಷ್ಟ್ರದ ಸಚಿವರಿಗೆ ಖಾತೆ ಹಂಚಿಕೆ, ಗೃಹಖಾತೆ ಉಳಿಸಿಕೊಂಡ ದೇವೇಂದ್ರ ಫಡ್ನವಿಸ್‌

Sampriya
ಭಾನುವಾರ, 22 ಡಿಸೆಂಬರ್ 2024 (10:58 IST)
Photo Courtesy X
ಮುಂಬೈ:  ದೇವೇಂದ್ರ ಫಡ್ನವಿಸ್‌ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ 2 ವಾರಗಳ ಬಳಿಕ ಸಚಿವ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.

ಗೃಹ ಇಲಾಖೆ, ಇಂಧನ ಇಲಾಖೆ ಹಾಗೂ ಸಾಮಾನ್ಯ ಆಡಳಿತ ಖಾತೆ ಸೇರಿದಂತೆ ಅನೇಕ ಪ್ರಬಲ ಖಾತೆಗಳನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ನಗರಾಭಿವೃದ್ಧಿ, ವಸತಿ ಮತ್ತು ಲೋಕೋಪಯೋಗಿ ಇಲಾಖೆಗಳ ಉಸ್ತುವಾರಿ ವಹಿಸಿದ್ದಾರೆ. ಮತ್ತೊಬ್ಬ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು, ಅಬಕಾರಿ ಇಲಾಖೆಯ ಜವಾಬ್ದಾರಿ ನೀಡಲಾಗಿದೆ.

ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಡ ಭರ್ಜರಿ ಗೆಲುವು ಸಾಧಿಸಿತು. ಆ ನಂತರ ದೇವೇಂದ್ರ ಫಡ್ನವಿಸ್‌ ಸಿಎಂ ಆಗಿ, ಏಕನಾಥ್‌ ಶಿಂಧೆ, ಅಜಿತ್‌ ಪವಾರ್‌ ಡಿಸಿಎಂಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಸಚಿವರಿಗೆ ಖಾತೆಗಳನ್ನ ಹಂಚಿಕೆ ಮಾಡಲಾಗಿದೆ.

ಬಿಜೆಪಿ ಸಚಿವರಿಗೆ ಹಂಚಿಕೆಯಾಗಿರುವ ಖಾತೆಗಳು: ಚಂದ್ರಶೇಖರ ಬಾವನಕುಳೆ- ಕಂದಾಯ, ರಾಧಾಕೃಷ್ಣ ವಿಖೆ ಪಾಟೀಲ್- ಜಲ ಸಂಪನ್ಮೂಲ, ಕೃಷ್ಣಾ ಮತ್ತು ಗೋದಾವರಿ ಕಣಿವೆ ಅಭಿವೃದ್ಧಿ ನಿಗಮ, ಚಂದ್ರಕಾಂತ್ ಪಾಟೀಲ್ - ಉನ್ನತ ಮತ್ತು ತಾಂತ್ರಿಕ ಶಿಕ್ಷಣ, ಸಂಸದೀಯ ವ್ಯವಹಾರ, ಗಿರೀಶ್ ಮಹಾಜನ್- ಜಲ ಸಂಪನ್ಮೂಲ, ವಿದರ್ಭ, ತಾಪಿ, ಕೊಂಕಣ ಅಭಿವೃದ್ಧಿ ನಿಗಮ ಮತ್ತು ವಿಪತ್ತು ನಿರ್ವಹಣೆ, ಗಣೇಶ್ ನಾಯಕ್- ಅರಣ್ಯ, ಮಂಗಲ್ ಪ್ರಭಾತ್ ಲೋಧಾ ಕೌಶಲ್ಯ ಅಭಿವೃದ್ಧಿ, ಉದ್ಯೋಗ, ಉದ್ಯಮಶೀಲತೆ ಮತ್ತು ನಾವೀನ್ಯತೆ, ಜಯಕುಮಾರ್ ರಾವಲ್- ಮಾರ್ಕೆಟಿಂಗ್ ಮತ್ತು ಪ್ರೋಟೋಕಾಲ್, ಪಂಕಜಾ ಮುಂಡೆ- ಪರಿಸರ ಮತ್ತು ಹವಾಮಾನ ಬದಲಾವಣೆ, ಪಶುಸಂಗೋಪನೆ, ಅತುಲ್ ಸೇವಾ ಒಬಿಸಿ ಕಲ್ಯಾಣ, ಡೈರಿ ಅಭಿವೃದ್ಧಿ ಮತ್ತು ನವೀಕರಿಸಬಹುದಾದ ಇಂಧನ, ಅಶೋಕ್ ಉಯಿಕೆ- ಬುಡಕಟ್ಟು ಅಭಿವೃದ್ಧಿ, ಆಶಿಶ್ ಶೆಲಾರ್ ಸಾಂಸ್ಕೃತಿಕ ವ್ಯವಹಾರಗಳು ಮತ್ತು ಮಾಹಿತಿ ತಂತ್ರಜ್ಞಾನ, ಶಿವೇಂದ್ರಸಿನ್ಹ ಭೋಸಲೆ- ಸಾರ್ವಜನಿಕ ಕಾರ್ಯ (ಪಬ್ಲಿಕ್‌ ವರ್ಕ್‌), ಜಯಕುಮಾರ್ ಗೋರ್- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಂಜಯ್ ಸಾವ್ಕರೆ- ಜವಳಿ, ನಿತೇಶ್ ರಾಣೆ- ಮೀನುಗಾರಿಕೆ ಮತ್ತು ಬಂದರು, ಆಕಾಶ್ ಫಂಡ್ಕರ್- ಕಾರ್ಮಿಕ ಇಲಾಖೆ

ಶಿವಸೇನೆ (ಶಿಂಧೆ ಬಣ) ಸಚಿವರ ಖಾತೆಗಳು: ಗುಲಾಬ್ರಾವ್ ಪಾಟೀಲ್- ನೀರು ಸರಬರಾಜು ಮತ್ತು ನೈರ್ಮಲ್ಯ, ದಾದಾಜಿ ಭೂಸೆ- ಶಾಲಾ ಶಿಕ್ಷಣ, ಸಂಜಯ್ ರಾಥೋಡ್- ಮಣ್ಣು ಮತ್ತು ಜಲ ಸಂರಕ್ಷಣೆ, ಉದಯ್ ಸಾಮಂತ್- ಕೈಗಾರಿಕೆ ಮತ್ತು ಮರಾಠಿ ಭಾಷೆ, ಶಂಭುರಾಜ್ ದೇಸಾಯಿ- ಪ್ರವಾಸೋದ್ಯಮ, ಗಣಿಗಾರಿಕೆ, ಮಾಜಿ ಸೈನಿಕರ ಕಲ್ಯಾಣ ಇಲಾಖೆ, ಸಂಜಯ್ ಶಿರ್ಸತ್- ಸಾಮಾಜಿಕ ನ್ಯಾಯ, ಪ್ರತಾಪ್ ಸರ್ನಾಯಕ್ ಸಾರಿಗೆ, ಭಾರತ್ ಗೊಗವಾಲೆ- ಉದ್ಯೋಗ ಖಾತರಿ, ತೋಟಗಾರಿಕೆ, ಸಾಲ್ಟ್‌ಪ್ಯಾನ್‌ ಲ್ಯಾಂಡ್‌ ಅಭಿವೃದ್ಧಿ, ಪ್ರಕಾಶ್ ಅಬಿತ್ಕರ್- ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಎನ್‌ಸಿಪಿ (ಅಜಿತ್‌ ಪವಾರ್‌ ಬಣ) ಖಾತೆಗಳು: ಹಸನ್ ಮುಶ್ರೀಫ್- ವೈದ್ಯಕೀಯ ಶಿಕ್ಷಣ, ಧನಂಜಯ್ ಮುಂಡೆ - ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ರಕ್ಷಣೆ, ದತ್ತಾತ್ರೇ ಭರ್ನೆ- ಕ್ರೀಡೆ, ಯುವ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಔಕಾಫ್, ಅದಿತಿ ತತ್ಕರೆ- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಾಣಿಕ್ರಾವ್ ಕೊಕಾಟೆ- ಕೃಷಿ, ನರಹರಿ ಜಿರ್ವಾಲ್- ಆಹಾರ ಮತ್ತು ಔಷಧ ಆಡಳಿತ, ವಿಶೇಷ ನೆರವು ಖಾತೆ, ಮಕರಂದ್ ಪಾಟೀಲ್- ಪರಿಹಾರ ಮತ್ತು ಪುನರ್ವಸತಿ, ಬಾಬಾಸಾಹೇಬ್ ಪಾಟೀಲ್- ಸಹಕಾರ ಖಾತೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments