Webdunia - Bharat's app for daily news and videos

Install App

ಶಶಿಕಲಾ, ದಿನಕರನ್`ಗೆ ಪನ್ನೀರ್-ಪಳನಿ ಶಾಕ್

Webdunia
ಮಂಗಳವಾರ, 18 ಏಪ್ರಿಲ್ 2017 (11:34 IST)
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪಕ್ಷದ ಎರಡು ಎಲೆ ಚಿಹ್ನೆ ಉಳಿಸಿಕೊಳ್ಳಲು ಅಣ್ಣಾಡಿಎಂಕೆಯ ಪನ್ನೀರ್ ಸೆಲ್ವಂ ಮತ್ತು ಸಿಎಂ ಪಳನಿಸ್ವಾಮಿ ಬಣ ಒಂದಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಧ್ಯಾಹ್ನ ಎರಡೂ ಬಣಗಳ ಶಾಸಕರ ಸಭೆ ನಡೆಯಲಿದ್ದು, ಅಂತಿಮ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಪಕ್ಷದ ಉಪ ಕಾರ್ಯದರ್ಶಿ ಟಿಟಿವಿ ದಿನಕರನ್ ವಿರುದ್ಧ ಪಕ್ಷದಲ್ಲಿ ಸುಪ್ತವಾಗಿದ್ದ ಆಕ್ರೋಶ ಈಗ ಭುಗಿಲೆದ್ದಿದೆ. ಕಳೆದ ರಾತ್ರಿಯೇ 25 ಸಚಿವರು ಮತ್ತು ಶಾಸಕರನ್ನೊಳಗೊಂಡ ಸಭೆ ನಡೆದಿದ್ದು, ಎರಡೂ ಬಣಗಳು ಒಟ್ಟಾಗಿ ಹೋಗುವ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಆದರೆ, ಪನ್ನೀರ್ ಸೆಲ್ವಂ ಬಣದ ವಿಲೀನಕ್ಕೆ ಶಶಿಕಲಾ ಮತ್ತು ದಿನಕರನ್ ವಿರೋಧಿಸುವ ಸಾಧ್ಯತೆ ಇದ್ದು, ಅವರನ್ನೇ ಪಕ್ಷದಿಂದ ಉಚ್ಚಾಟಿಸಲಾಗುತ್ತೆ ಎಂಬ ಮಾತುಗಳು ಕೇಳಿಬರುತ್ತಿವೆ. ಪನ್ನೀರ್ ಸೆಲ್ವಂ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿ ವಾಪಸ್ ಕರೆ ತರುವ ಯತ್ನ ನಡೆದಿದೆ ಎನ್ನಲಾಗಿದೆ.

ಉಪಚುನಾವಣೆಯ ಭ್ರಷ್ಟಾಚಾರ ಮತ್ತು ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೇ ಲಂಚ ನೀಡಿದ ಆರೋಪ ಎದುರಿಸುತ್ತಿರುವ ಟಿಟಿವಿ ದಿನಕರನ್`ನಿಂದಾಗಿ ಪಕ್ಷದ ಇಮೇಜ್`ಗೆ ಧಕ್ಕೆಯಾಗಿದೆ. ಹೀಗಾಗಿ, ಅವರನ್ನ ಹೊರಹಾಕಿ, ಪನ್ನೀರ್ ಸೆಲ್ವಂ ಬಣವನ್ನ ವಾಪಸ್ ಕರೆ ತಂದು ಎರಡು ಎಲೆ ಚಿಹ್ನೆ ವಾಪಸ್ ಪಡೆಯುವುದು ಮುಖಂಡರ ಉದ್ದೇಶವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments