Webdunia - Bharat's app for daily news and videos

Install App

ಸೀಮಿತ ದಾಳಿಯ ಚರ್ಚೆ ಸೇನೆಗೆ ಅಪಮಾನ: ವೆಂಕಯ್ಯ ನಾಯ್ಡು

Webdunia
ಬುಧವಾರ, 5 ಅಕ್ಟೋಬರ್ 2016 (14:09 IST)
ಪಾಕಿಸ್ತಾನ ಆಕ್ರಮಿತ ಕಾಶ್ಮಿರದೊಳಗೆ ನುಗ್ಗಿ ಭಾರತೀಯ ಸೇನಾಪಡೆಗಳು ನಡೆಸಿದ ಸೀಮಿತ ದಾಳಿಯ ಸಾಕ್ಷ್ಯ ಕೇಳುವುದು ಭಾರತೀಯ ಸೇನೆಗೆ ಅಪಮಾನ ಮಾಡಿದಂತೆ ಎಂದು ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
 
ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷ ಕೂಡಾ ತನ್ನ ತಪ್ಪನ್ನು ತಿದ್ದಿಕೊಂಡು ಸಾಕ್ಷ್ಯ ಕೇಳುವ ನಾಯಕರಿಂದ ದೂರವಾಗಿದೆ. ಆಪ್ ಪಕ್ಷ ಕೂಡಾ ತನ್ನ ಹೇಳಿಕೆಯನ್ನು ಸ್ಪಷ್ಟಪಡಿಸಿದೆ ಎಂದು ತಿಳಿಸಿದ್ದಾರೆ. 
 
ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯ ಬಗ್ಗೆ ಯಾರೊಬ್ಬರಿಗೆ ಅನುಮಾನವಿಲ್ಲ. ಸೇನೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸೇನೆಯ ಸೀಮಿತ ದಾಳಿಯ ಬಗ್ಗೆ ಚರ್ಚೆ ಮಾಡುವುದೇ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಸೇನಾ ಕಾರ್ಯಾಚರಣೆಯ ಪ್ರಧಾನ ನಿರ್ದೇಶಕರಾದ ರಣಬೀರ್ ಸಿಂಗ್ ಸ್ವತಃ ಮಾಧ್ಯಮಗಳಿಗೆ ಸೇನೆಯ ಸೀಮಿತ ದಾಳಿಯ ಬಗ್ಗೆ ಹೇಳಿಕೆ ನೀಡಿದ್ದಲ್ಲದೇ ಸರ್ವಪಕ್ಷಗಳ ಸಭೆಯಲ್ಲೂ ಮಾಹಿತಿ ನೀಡಿದ್ದಾರೆ ಎಂದರು.
 
ಭಾರತೀಯ ಸೇನಾಪಡೆಗಳು ಪಿಒಕೆ ಮೇಲೆ ನಡೆಸಿದ ದಾಳಿಯ ಬಗ್ಗೆ ದೇಶದ ಜನತೆ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ವಿಶ್ವ ಕೂಡಾ ಭಾರತ ತೆಗೆದುಕೊಂಡ ನಿಲುವನ್ನು ಪ್ರಶಂಸಿವೆ ಎಂದರು.
 
ಪಾಕಿಸ್ತಾನ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಮನಬಂದಂತೆ ಹೇಳಿಕೆ ನೀಡುತ್ತಿದೆ. ಭಾರತೀಯ ಸೇನೆಯಿಂದ ಹತರಾದ ಉಗ್ರರು ಪಾಕಿಸ್ತಾನ ನಾಗರಿಕರಾಗಿದ್ದರೂ ಅವರ ಅಂತ್ಯ ಸಂಸ್ಕಾರ ಮಾಡದ ಪರಿಸ್ಥಿತಿಯಲ್ಲಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಲೇವಡಿ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments