Select Your Language

Notifications

webdunia
webdunia
webdunia
webdunia

ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಮೇಲ್ಮನವಿ ಸಲ್ಲಿಸಿದ ಅನ್ಬಳಗನ್

ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಮೇಲ್ಮನವಿ ಸಲ್ಲಿಸಿದ ಅನ್ಬಳಗನ್
ಚೆನ್ನೈ , ಸೋಮವಾರ, 6 ಜುಲೈ 2015 (15:53 IST)
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ತಮಿಳುನಾಡಿನ ಡಿಎಂಕೆ ನಾಯಕ ಅನ್ಬಳಗನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಮೇಲ್ಮನವಿ ಸಲ್ಲಿಸಿದ್ದಾರೆ. 
 
ಪ್ರಕರಣದ ಆರೋಪಿಯಾಗಿದ್ದ ಜಯಲಲಿತಾ ಕೆಳ ಹಂತದ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಬಳಿಕ ವಿಚಾರಣೆ ನಡೆಸಿದ್ದ ಕೋರ್ಟ್, ಕಳೆದ ಮೇ 11ರಂದು ತೀರ್ಪು ನೀಡಿ ಜಯಲಲಿತಾ ಪ್ರಕರಣದಲ್ಲಿ ನಿರ್ದೋಷಿಯಾಗಿದ್ದಾರೆ ಎಂದು ಆದೇಶಿಸುವ ಮೂಲಕ  ಪ್ರಕರಣದಿಂದ ಖುಲಾಸೆಗಳಿಸಿತ್ತು. ಆದ್ದರಿಂದ ಪ್ರಕರಣದ ಪ್ರತಿವಾದಿಯಾಗಿದ್ದ ನಾಯಕ ಅನ್ಬಳಗನ್ ಇಂದು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. 
 
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವೂ ಕೂಡ ಈಗಾಗಲೇ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದು, 2700 ಪುಟಗಳ ವಿವರಣೆ ಸಲ್ಲಿಕೆ ಮಾಡಿದೆ. 
 
ಕಾನೂನಿನ ಪ್ರಕಾರ, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಬೇಕಿದ್ದಲ್ಲಿ ಆದೇಶ ಹೊರಬಿದ್ದ 3 ತಿಂಗಳ ಒಳಗೆ ನಿರ್ಧಾರ ಕೈಗೊಳ್ಳಬೇಕು ಎಂಬುದು ನಿಯಮ. ಈ ಹಿನ್ನೆಲೆಯಲ್ಲಿ ಅನ್ಬಳಗನ್ ಇಂದು ಮೇಲ್ಮನವಿ ಸಲ್ಲಿಸಿದ್ದಾರೆ. 
 
ಜಯಲಲಿತಾ ಅವರು ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ 1998ರಲ್ಲಿ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಪ್ರಕರಣ ದಾಖಲಿಸಿದ್ದರು.  

Share this Story:

Follow Webdunia kannada