Webdunia - Bharat's app for daily news and videos

Install App

ಇಹಲೋಕ ತ್ಯಜಿಸಿದ ಮೇಲೂ ಜಯಲಲಿತಾ ಪಕ್ಷದೊಂದಿಗೆ ಕರುಣಾನಿಧಿಗೆ ತಿಕ್ಕಾಟ

Webdunia
ಬುಧವಾರ, 8 ಆಗಸ್ಟ್ 2018 (09:56 IST)
ಚೆನ್ನೈ: ಬದುಕಿದ್ದಾಗ ಜಯಲಲಿತಾ ಮತ್ತು ಕರುಣಾನಿಧಿ ಪರಸ್ಪರ ರಾಜಕೀಯವಾಗಿ ಕೆಸರೆರಚಾಟ ನಡೆಸಿಕೊಂಡೇ ಬಂದವರು. ವಿಪರ್ಯಾಸವೆಂದರೆ ಕರುಣಾನಿಧಿ ತೀರಿಕೊಂಡ ಮೇಲೂ ಈಗ ಜಯಲಲಿತಾ ಪಕ್ಷದೊಂದಿಗೆ ಗುದ್ದಾಟ ನಡೆಸಬೇಕಿದೆ.
 

ಮರೀನಾ ಬೀಚ್ ನಲ್ಲಿ ಅಂತ್ಯಕ್ರಿಯೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಜಯಲಲಿತಾರ ಆಡಳಿತಾರೂಢ ಎಐಎಡಿಎಂಕೆ ಪಕ್ಷ ತಕರಾರು ತೆಗೆದಿದೆ. ಇದರ ವಿಚಾರಣೆ ಮದ್ರಾಸ್ ಹೈಕೋರ್ಟ್ ನಲ್ಲಿ ನಡೆಯುತ್ತಿದೆ.

ಈ ಸಂದರ್ಭದಲ್ಲಿ ಜಯಲಲಿತಾ ಸಮಾಧಿಗೆ ಅವಕಾಶ ಮಾಡಿಕೊಟ್ಟಿರುವಾಗ ಕರುಣಾನಿಧಿಗೆ ಯಾಕೆ ಅವಕಾಶ ಕೊಡುತ್ತಿಲ್ಲ. ಏಳು ದಿನಗಳ ಶೋಕಾಚರಣೆ ಮಾಡುತ್ತೀರಿ. ಹಾಗಿದ್ದರೆ ಸಮಾಧಿಗೆ ಜಾಗ ಕೊಡಲು ಹಿಂದೇಟು ಹಾಕುತ್ತಿರುವುದೇಕೆ ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ಆದರೆ ಕರುಣಾನಿಧಿ ಹಾಲಿ ಸಿಎಂ ಅಲ್ಲ ಎಂದು ಎಐಎಡಿಎಂಕೆ ವಾದ ಮಂಡಿಸಿದೆ. ಜಯಲಲಿತಾಗೆ ತಮ್ಮ ರಾಜಕೀಯ ಗುರುವಿನ ಜತೆಗೆ ಸಮಾಧಿ ಮಾಡಲು ಅವಕಾಶ ಕೊಟ್ಟಿರುವಾಗ ಕರುಣಾನಿಧಿಗೆ ಯಾಕೆ ಕೊಡುತ್ತಿಲ್ಲ ಎಂದು ಡಿಎಂಕೆ ಬೇಸರ ವ್ಯಕ್ತಪಡಿಸಿದೆ. ಅಂತೂ ಪ್ರಮುಖ ನಾಯಕನೊಬ್ಬನ ಅಗಲುವಿಕೆಯ ಸಂದರ್ಭದಲ್ಲೂ ಈ ರೀತಿಯ ರಾಜಕೀಯ ಕೆಸರೆರಚಾಟ ನಡೆಯುತ್ತಿರುವುದು ವಿಪರ್ಯಾಸ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments