Select Your Language

Notifications

webdunia
webdunia
webdunia
webdunia

ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು

ಪ್ರತಿಷ್ಠೆ ಹಾಳುಮಾಡಲು ದಿವಾಳಿ ಪಾಕಿಸ್ತಾನ ಸಂಚು
ಶ್ರೀನಗರ , ಬುಧವಾರ, 8 ಫೆಬ್ರವರಿ 2023 (12:50 IST)
ಶ್ರೀನಗರ : ಈಗಾಗಲೇ ಆರ್ಥಿಕ ಬಿಕ್ಕಟ್ಟಿನಿಂದ ದಿವಾಳಿಯಾಗಿರುವ ಪಾಕಿಸ್ತಾನ ಇದೀಗ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ಹಾಗೂ ಭಾರತೀಯ ಸಶಸ್ತ್ರ ಪಡೆಗಳನ್ನು ನಾಶ ಮಾಡಲು ಸಂಚು ರೂಪಿಸಿದೆ ಎಂದು ಭಾರತೀಯ ಗುಪ್ತಚರ ಏಜೆನ್ಸಿಗಳು ವರದಿ ನೀಡಿವೆ.

ಕಾಶ್ಮೀರದ ಕಣಿವೆಯಲ್ಲಿ ಭಾರತ ಸರ್ಕಾರದ ಪ್ರತಿಷ್ಠೆಯನ್ನು ಹಾಳುಮಾಡುವ ರೀತಿಯಲ್ಲಿ ಸಂಚು ರೂಪಿಸಲು ಪಾಕಿಸ್ತಾನವು ಪ್ರಪಂಚದಾದ್ಯಂತದ ತನ್ನ ರಾಯಭಾರ ಕಚೇರಿಗಳನ್ನು ಕೇಳಿದ್ದು, ಸಂಚು ರೂಪಿಸುವ ರಹಸ್ಯ ಟಿಪ್ಪಣಿಯನ್ನು ರಾಯಭಾರ ಕಚೇರಿಗಳಿಗೆ ಕಳುಹಿಸಿದೆ ಎನ್ನಲಾಗಿದೆ. 

`ಕಾಶ್ಮೀರ ಒಗ್ಗಟ್ಟಿನ ದಿನ’ದಂದು (ಫೆಬ್ರವರಿ 5 ರಂದು ಪಾಕಿಸ್ತಾನವು ಆಚರಿಸುವ ದಿನ), ಇಸ್ಲಾಮಾಬಾದ್ನಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ತನ್ನ ಎಲ್ಲಾ ರಾಯಭಾರ ಕಚೇರಿಗಳಿಗೆ ಫ್ಯಾಕ್ಸ್ ಮತ್ತು ಇಮೇಲ್ಗಳನ್ನು ಕಳುಹಿಸಿದೆ. ಅದರಲ್ಲಿ ಭಾರತೀಯ ಸಶಸ್ತ್ರ ಪಡೆಗಳನ್ನು ನಾಶ ಮಾಡುವ ಯೋಜನೆಗಳ ಬಗ್ಗೆ ವಿವರಿಸಿದೆ ಎಂದು ಗುಪ್ತಚರ ಏಜೆನ್ಸಿ ವಿವರಿಸಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಚಿತ್ರೋತ್ಸವದ ಲೋಗೋ ಲಾಂಚ್ ಮಾಡಿದ ಸಿಎಂ ಬೊಮ್ಮಾಯಿ