Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ಈ ಬಾರಿ ಪ್ರಧಾನಿ ಮೋದಿ ಅವರಿಂದ ದೀಪಾವಳಿ ಉದ್ಘಾಟನೆ

Webdunia
ಗುರುವಾರ, 9 ಸೆಪ್ಟಂಬರ್ 2021 (08:41 IST)
ನವದೆಹಲಿ (ಸೆ. 09) : ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ಎದುರಾಗಲಿರುವ ಹಿನ್ನಲೆ ಈಗಾಗಲೇ ಬಿಜೆಪಿ ಸಿದ್ಧತೆ ಆರಂಭಿಸಿದೆ. ಎರಡನೇ ಬಾರಿ ಕೂಡ ಬಿಜೆಪಿ ಗೆಲ್ಲುವ ರಣತಂತ್ರ ಹೂಡಿದ್ದು, ಇದಕ್ಕಾಗಿ ಈಗಾಗಲೇ ಕಾರ್ಯ ಆರಂಭಿಸಿದೆ. ಇದೆ ವಿಧಾನಸಭಾ ಚುನಾವಣಾ ಲೆಕ್ಕಾಚಾರವನ್ನು ಗಮನದಲ್ಲಿರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆಯನ್ನು ಉದ್ಘಾಟಿಸುವ ಸಾಧ್ಯತೆ ಇದೆ.

ಅಯೋಧ್ಯೆಯ ಸರಯೂ ನದಿ ತಟದಲ್ಲಿ ಆಚರಿಸಲಾಗುವ ಈ ವಿಶೇಷ ದೀಪಾವಳಿ ಆಚರಣೆಯನ್ನು ಪ್ರತಿ ಬಾರಿ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಉದ್ಘಾಟಿಸುತ್ತಾ ಬರುತ್ತಿದ್ದಾರೆ.
ಪ್ರಧಾನಿ ಮೋದಿ ಅವರು ನವೆಂಬರ್ 3 ರಂದು ಈ ಬೃಹತ್ ಕಾರ್ಯಕ್ರಮವನ್ನು ಉದ್ಘಾಟಿಸುವ ಸಾಧ್ಯತೆಯಿದೆ, ಇದಕ್ಕಾಗಿ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದೆ, ಅಯೋಧ್ಯೆಯ ಸರಯೂ ತಟದಲ್ಲಿ ಹೊಸ ಗಿನ್ನೆಸ್ ದಾಖಲೆ 6.5 ಲಕ್ಷ ದೀಪಗಳನ್ನು ಬೆಳಗಿಸಲಾಗುವುದು.
ಇನ್ನು ನರೇಂದ್ರ ಮೋದಿ ಅವರು ಈ ಕಾರ್ಯಕ್ರಮಕ್ಕೆ ಹಾಜರಾಗುವ ಕುರಿತು ಯಾವುದೇ ಅಧಿಕೃತ ಮಾಹಿತಿಯನ್ನು ಪ್ರಧಾನಿ ಸಚಿವಾಲಯ ಅಧಿಕೃತ ಪಡಿಸಿಲ್ಲ. ಆದರೆ, ಈ ಕುರಿತು ಮಾತನಾಡಿರುವ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ವಿಶಾಲ್ ಸಿಂಗ್, ಪ್ರಧಾನಿ ಮೋದಿ ಅವರನ್ನು ಮತ್ತೆ ಅಯೋಧ್ಯೆಯಲ್ಲಿ ನೋಡುತ್ತಿರುವುದು ನಮ್ಮ ಅದೃಷ್ಟ. ಈ ಬಾರಿ ದೀಪೋತ್ಸವಕ್ಕ ಅದ್ದೂರಿ ತಯಾರಿ ನಡೆಸಲಾಗುತ್ತಿದೆ. ಈಗಾಗಲೇ ಬಾಲಿವುಡ್ ನ ಪ್ರಖ್ಯಾತ ಕಲಾ ವಿನ್ಯಾಸಕ ನಿತಿನ್ ಚಂದ್ರಕಾಂತ್ ದೇಸರ್ ದೀಪೋತ್ಸವದ ಕಲ್ಪನೆ ಸಜ್ಜುಗೊಳಿಸಿದ್ದು, ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments