Webdunia - Bharat's app for daily news and videos

Install App

ವಿಶ್ವಾಸಮತ ಯಾಚಿಸಲು ಆದೇಶಿಸುವಂತೆ ರಾಜ್ಯಪಾಲರಿಗೆ ಡಿಎಂಕೆ ಮನವಿ

Webdunia
ಭಾನುವಾರ, 27 ಆಗಸ್ಟ್ 2017 (12:23 IST)
ಮುಖ್ಯಮಂತ್ರಿ ಎಡಪ್ಪಾಡಿ ಪಳಮಿಸ್ವಾಮಿ ಸರಕಾರ ಬಹುಮತ ಕಳೆದುಕೊಂಡಿದ್ದರಿಂದ ವಿಶ್ವಾಸಮತ ಯಾಚಿಸಲು ಆದೇಶ ನೀಡುವಂತೆ ಡಿಎಂಕೆ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಡಿಎಂಕೆ ಮುಖಂಡ ಸ್ಟಾಲಿನ್, ರಾಜ್ಯಸಭೆ ಸದಸ್ಯ ಕನಿಮೋಳಿ ಮತ್ತು ಇತರ ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನು ಭೇಟಿ ಮಾಡಿದರು.
 
ಎಐಎಡಿಎಂಕೆ ಉಚ್ಚಾಟಿತ ಮುಖಂಡ ಟಿಟಿವಿ ದಿನಕರನ್, ತಮ್ಮ ಬಳಿ 19 ಶಾಸಕರ ಬೆಂಬಲವಿದೆ ಎಂದು ಘೋಷಿಸಿದ್ದರಿಂದ ಸರಕಾರ ಬಹುಮತ ಕಳೆದುಕೊಂಡಿದೆ. ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶಿಸಿ ಬಹುಮತ ಯಾಚನೆಗೆ ಆದೇಶ ನೀಡಬೇಕು ಎಂದು ಡಿಎಂಕೆ ಮುಖಂಡ ಸ್ಟಾಲಿನ್ ಒತ್ತಾಯಿಸಿದ್ದಾರೆ.
 
ಎಐಎಡಿಎಂಕೆಯ ಸಿಎಂ ಪಳನಿಸ್ವಾಮಿ ಬಣ ಮತ್ತು ಮಾಜಿ ಸಿಎಂ ಪನ್ನೀರ್ ಸೆಲ್ವಂ ಬಣ ಕೆಲ ದಿನಗಳ ಹಿಂದೆ ಒಂದಾಗಿದ್ದು ಟಿಟಿವಿ ದಿನಕರನ್ ಮತ್ತು ವಿ.ಕೆ.ಶಶಿಕಲಾರನ್ನು ಪಕ್ಷದಿಂದ ಉಚ್ಚಾಟಿಸುವ ನಿರ್ಣಯ ಕೈಗೊಳ್ಳಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments